ಎನ್.ಎಸ್. ಬೋಸರಾಜು 
ರಾಜ್ಯ

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್.ಎಸ್ ಭೋಸರಾಜು ವಿರುದ್ಧ RTI ಕಾರ್ಯಕರ್ತ ದೂರು

ಬೋಸರಾಜು ಅವರ ಪತ್ನಿ ಎನ್.ಕೃಷ್ಣ ವೇಣಿ ಹೆಸರಿನಲ್ಲಿ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿರುವ ಕಲ್ಲಹಳ್ಳಿ, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಯಚೂರಿನ ಸರ್ವೆ ಸಂಖ್ಯೆ 1252, 125ರಲ್ಲಿನ ಐದು ಎಕರೆ ಮೀಸಲು ಅರಣ್ಯ ಭೂಮಿಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಬೋಸರಾಜು ಅವರ ಪತ್ನಿ ಎನ್.ಕೃಷ್ಣ ವೇಣಿ ಹೆಸರಿನಲ್ಲಿ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿರುವ ಕಲ್ಲಹಳ್ಳಿ, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತೊಂದೆಡೆ ದಿನೇಶ್ ಹಲ್ಲಹಳ್ಳಿ ಅವರ ಆರೋಪಗಳನ್ನು ಸಂಪೂರ್ಣ ಸುಳ್ಳು ಮತ್ತು ಮಾನಹಾನಿಕರ ಎಂದು ಬೋಸರಾಜು ತಳ್ಳಿ ಹಾಕಿದ್ದಾರೆ.

ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘‘ನಾನಾಗಲಿ, ನನ್ನ ಕುಟುಂಬದವರಾಗಲಿ ಇದುವರೆಗೆ ಮೀಸಲು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ. ವಾಸ್ತವವಾಗಿ, ಅರಣ್ಯ ಅಧಿಕಾರಿಗಳು ನೀಡಿದ ನೋಟೀಸ್ ಈಗಾಗಲೇ ಹೈಕೋರ್ಟ್‌ನ ಕಲಬುರಗಿ ಪೀಠದಿಂದ ರದ್ದುಗೊಳಿಸಲಾಗಿದೆ. 1999 ರಲ್ಲಿ ಸಾರ್ವಜನಿಕ ಜೀವನ ಪ್ರವೇಶಿಸುವ ಮುನ್ನಾ 1987 ರಲ್ಲಿ ಕಾನೂನುಬದ್ಧವಾಗಿ ಭೂಮಿಯನ್ನು ಖರೀದಿಸಲಾಗಿದೆ. ಆಗ ನಾನು ಶಾಸಕ ಅಥವಾ ಎಂಎಲ್‌ಸಿ ಆಗಿರಲಿಲ್ಲ, ಮಂತ್ರಿಯಾಗಿರಲಿಲ್ಲ ಎಂದು ತಿಳಿಸಿದರು.

ರಾಜಕೀಯ ವಿರೋಧಿಗಳ ಸಂಚಿನಿಂದ ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಈ ಆರೋಪಗಳನ್ನು ಮಾಡಲಾಗುತ್ತಿದೆ. ಇದು ನನ್ನ ವಿರುದ್ಧ ಮಾನಹಾನಿ ಮಾಡುವ ರಾಜಕೀಯ ನಡೆಯಾಗಿದೆ. ಆದಾಯ ತೆರಿಗೆ ಸಲ್ಲಿಕೆ ಮತ್ತು ಲೋಕಾಯುಕ್ತಕ್ಕೆ ಅಧಿಕೃತ ಆಸ್ತಿ ಬಹಿರಂಗಪಡಿಸುವಿಕೆ ಎರಡರಲ್ಲೂ ಪಾರದರ್ಶಕವಾಗಿ ತಮ್ಮ ಪತ್ನಿಯ ಹೆಸರಿನಲ್ಲಿರುವ ಎಲ್ಲಾ ಭೂಮಿಯನ್ನು ಘೋಷಿಸಿದ್ದೇನೆ. ತಮ್ಮ ವಿರುದ್ಧದ ಆರೋಪಗಳು ಆಧಾರ ರಹಿತವಾಗಿದ್ದು, ಯಾವುದೇ ಪರಿಶೀಲನೆ ಇಲ್ಲದೆ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ ಎದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ: Sonam Wangchuk ಸಂಸ್ಥೆ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ

ಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ: ಬಾಡಿಗೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅಸ್ತು!

ವಿಶ್ವಕಪ್‌ಗೂ ಮುನ್ನ ಭಾರತಕ್ಕೆ ಆಘಾತ: ಸ್ಟಾರ್ ಬೌಲರ್‌ಗೆ ಗಾಯ; ವೀಲ್‌ಚೇರ್‌ನಲ್ಲಿ ಸ್ಥಳಾಂತರ, Video!

ಜುಬೀನ್ ಗರ್ಗ್ ಸಾವಿನ ಪ್ರಕರಣ: ಸಂಗೀತಗಾರ ಶೇಖರ್ ಜ್ಯೋತಿ ಗೋಸ್ವಾಮಿ ಬಂಧಿಸಿದ SIT

Wipro ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ Azim Premji

SCROLL FOR NEXT