ಎನ್.ಎಸ್. ಬೋಸರಾಜು 
ರಾಜ್ಯ

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್.ಎಸ್ ಭೋಸರಾಜು ವಿರುದ್ಧ RTI ಕಾರ್ಯಕರ್ತ ದೂರು

ಬೋಸರಾಜು ಅವರ ಪತ್ನಿ ಎನ್.ಕೃಷ್ಣ ವೇಣಿ ಹೆಸರಿನಲ್ಲಿ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿರುವ ಕಲ್ಲಹಳ್ಳಿ, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಯಚೂರಿನ ಸರ್ವೆ ಸಂಖ್ಯೆ 1252, 125ರಲ್ಲಿನ ಐದು ಎಕರೆ ಮೀಸಲು ಅರಣ್ಯ ಭೂಮಿಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಬೋಸರಾಜು ಅವರ ಪತ್ನಿ ಎನ್.ಕೃಷ್ಣ ವೇಣಿ ಹೆಸರಿನಲ್ಲಿ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿರುವ ಕಲ್ಲಹಳ್ಳಿ, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತೊಂದೆಡೆ ದಿನೇಶ್ ಹಲ್ಲಹಳ್ಳಿ ಅವರ ಆರೋಪಗಳನ್ನು ಸಂಪೂರ್ಣ ಸುಳ್ಳು ಮತ್ತು ಮಾನಹಾನಿಕರ ಎಂದು ಬೋಸರಾಜು ತಳ್ಳಿ ಹಾಕಿದ್ದಾರೆ.

ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘‘ನಾನಾಗಲಿ, ನನ್ನ ಕುಟುಂಬದವರಾಗಲಿ ಇದುವರೆಗೆ ಮೀಸಲು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ. ವಾಸ್ತವವಾಗಿ, ಅರಣ್ಯ ಅಧಿಕಾರಿಗಳು ನೀಡಿದ ನೋಟೀಸ್ ಈಗಾಗಲೇ ಹೈಕೋರ್ಟ್‌ನ ಕಲಬುರಗಿ ಪೀಠದಿಂದ ರದ್ದುಗೊಳಿಸಲಾಗಿದೆ. 1999 ರಲ್ಲಿ ಸಾರ್ವಜನಿಕ ಜೀವನ ಪ್ರವೇಶಿಸುವ ಮುನ್ನಾ 1987 ರಲ್ಲಿ ಕಾನೂನುಬದ್ಧವಾಗಿ ಭೂಮಿಯನ್ನು ಖರೀದಿಸಲಾಗಿದೆ. ಆಗ ನಾನು ಶಾಸಕ ಅಥವಾ ಎಂಎಲ್‌ಸಿ ಆಗಿರಲಿಲ್ಲ, ಮಂತ್ರಿಯಾಗಿರಲಿಲ್ಲ ಎಂದು ತಿಳಿಸಿದರು.

ರಾಜಕೀಯ ವಿರೋಧಿಗಳ ಸಂಚಿನಿಂದ ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಈ ಆರೋಪಗಳನ್ನು ಮಾಡಲಾಗುತ್ತಿದೆ. ಇದು ನನ್ನ ವಿರುದ್ಧ ಮಾನಹಾನಿ ಮಾಡುವ ರಾಜಕೀಯ ನಡೆಯಾಗಿದೆ. ಆದಾಯ ತೆರಿಗೆ ಸಲ್ಲಿಕೆ ಮತ್ತು ಲೋಕಾಯುಕ್ತಕ್ಕೆ ಅಧಿಕೃತ ಆಸ್ತಿ ಬಹಿರಂಗಪಡಿಸುವಿಕೆ ಎರಡರಲ್ಲೂ ಪಾರದರ್ಶಕವಾಗಿ ತಮ್ಮ ಪತ್ನಿಯ ಹೆಸರಿನಲ್ಲಿರುವ ಎಲ್ಲಾ ಭೂಮಿಯನ್ನು ಘೋಷಿಸಿದ್ದೇನೆ. ತಮ್ಮ ವಿರುದ್ಧದ ಆರೋಪಗಳು ಆಧಾರ ರಹಿತವಾಗಿದ್ದು, ಯಾವುದೇ ಪರಿಶೀಲನೆ ಇಲ್ಲದೆ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ ಎದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 world cup: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಬೆಥೆಲ್ ಶತಕ ವ್ಯರ್ಥ; ಆಂಗ್ಲರ ಮಣಿಸಿದ ಭಾರತ ಫೈನಲ್ಸ್ ಗೆ ಲಗ್ಗೆ

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!

ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ

T20 World Cup Semi Final 2026: 19 ವರ್ಷಗಳ ಐತಿಹಾಸಿಕ ದಾಖಲೆ ಮುರಿದ ಸಂಜು-ಇಶಾನ್ ಕಿಶಾನ್! Video

SCROLL FOR NEXT