ಮನೆಗಳಿಗೆ ನುಗ್ಗಿದ ಮಳೆ ನೀರು TNIE
ರಾಜ್ಯ

ಬೆಂಗಳೂರಿನಲ್ಲಿ ಇಂದು ಸಹ ಧಾರಾಕಾರ ಮಳೆ: ರಾಮಕೃಷ್ಣನಗರದಲ್ಲಿ 100 ಮನೆ ಜಲಾವೃತ

ಬೆಂಗಳೂರು ದಕ್ಷಿಣದಲ್ಲಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಭಾರೀ ಮಳೆಯಾಗಿದೆ. ಇದರ ಪರಿಣಾಮವಾಗಿ ರಸ್ತೆಗಳಲ್ಲಿ ನೀರು ತುಂಬಿ ಸುಮಾರು 100 ಮನೆಗಳಿಗೆ ನೀರು ನುಗ್ಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಗುಲಾಬ್ ಪಾಷಾ ಹೇಳಿದರು.

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಇಂದು ಸಂಜೆ ಸುರಿದ ಮಳೆಯಿಂದಾಗಿ ಬೆಂಗಳೂರು ದಕ್ಷಿಣ ಸಮೀಪದ ಯಲಚೇನಹಳ್ಳಿಯ ರಾಮಕೃಷ್ಣನಗರ ಮತ್ತು ಫಯಾಜಾಬಾದ್‌ನಲ್ಲಿ ಸುಮಾರು 100 ಮನೆಗಳು ಜಲಾವೃತವಾಗಿವೆ.

ಮಳೆಯಿಂದಾಗಿ ಚರಂಡಿಯ ಗಲೀಜು ನೀರು ಮನೆಗಳಿಗೆ ನುಗ್ಗಿ ಜೀವನ ದುಸ್ತರವಾಗಿದೆ. ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಗೆ ಈ ಹಿಂದೆ ಹಲವು ಬಾರಿ ದೂರು ನೀಡಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಭಾರೀ ಮಳೆಯಾಗಿದೆ. ಇದರ ಪರಿಣಾಮವಾಗಿ ರಸ್ತೆಗಳಲ್ಲಿ ನೀರು ತುಂಬಿ ಸುಮಾರು 100 ಮನೆಗಳಿಗೆ ನೀರು ನುಗ್ಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಗುಲಾಬ್ ಪಾಷಾ ಹೇಳಿದರು. 15 ರಿಂದ 20 ನಿಮಿಷಗಳ ಕಾಲ ಮಳೆಯಾದರೂ ಸಾಕು, ಇಡೀ ಪ್ರದೇಶವು ಜಲಾವೃತವಾಗುತ್ತದೆ. ಕಳೆದ 12 ವರ್ಷಗಳಿಂದ ಈ ಸಮಸ್ಯೆ ಎದುರಿಸುತ್ತಿದ್ದೇವೆ. ಮಳೆಗಾಲದಲ್ಲಿ ಮನೆ, ಅಂಗಡಿಗಳಿಗೆ ನೀರು ನುಗ್ಗಿ ದುರ್ವಾಸನೆ ಬೀರುತ್ತಿದ್ದು, ಮಕ್ಕಳು ನೀರಿನಿಂದ ಹರಡುವ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಆರೋಪಿಸಿದರು.

ಏತನ್ಮಧ್ಯೆ, ಬೆಂಗಳೂರಿನ ತುದಿಯಲ್ಲಿರುವ ಸಾಯಿಬಾಬಾ ಲೇಔಟ್‌ನ ಮೇಲ್ಭಾಗದ ಪ್ರದೇಶ ಮಳೆಯಿಂದಾಗಿ ಮತ್ತೆ ಜಲಾವೃತವಾಗಿದೆ. ಸ್ಥಳೀಯ ಶಾಸಕ ಬೈರತಿ ಬಸವರಾಜ್ ಅವರೊಂದಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಕೂಡ ಭೇಟಿ ನೀಡಿದ್ದಾರೆ. ರೈಲ್ವೇ ಸೇತುವೆಯಡಿ ಹೆಚ್ಚುವರಿ ವೆಂಟ್ ಕಾಮಗಾರಿ ನಡೆಯುತ್ತಿದ್ದು, ಬೇಸಿಗೆ ವೇಳೆಗೆ ಪೂರ್ಣಗೊಳ್ಳಲಿದ್ದು, ಕೆಲ ತಿಂಗಳುಗಳ ಕಾಲ ಸದ್ಯದ ಪರಿಸ್ಥಿತಿ ಮುಂದುವರೆಯುತ್ತದೆ ಎಂದರು.

ಇನ್ನು ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ 35.50 ಮಿ.ಮೀ, ದೊರೆಸಾನಿಪಾಳ್ಯ 34.50 ಮಿ.ಮೀ, ಪುಲಕೇಶಿನಗರ 30 ಮಿ.ಮೀ, ಬೊಮ್ಮನಹಳ್ಳಿ 30.50 ಮಿ.ಮೀ, ಅರೆಕೆರೆ 24.50 ಮಿ.ಮೀ ಮಳೆ ಸಂಜೆ 4 ರಿಂದ 4:40 ರವರೆಗೆ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ರಾಜ್ಯದ 470 ಹಳ್ಳಿಗಳಿಗೆ ಮೊಬೈಲ್ ನೆಟ್​ವರ್ಕೇ ಇಲ್ಲ..!

ಮೋದಿ ನಿಜವಾದ ಮುತ್ಸದ್ದಿ: ದೂರದೃಷ್ಟಿ ಹೊಂದಿರುವ ಅದ್ಭುತ ನಾಯಕ; ನಟ ಮೋಹನ್‌ ಲಾಲ್ ಶ್ಲಾಘನೆ

ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು: 'ಇವ ನಮ್ಮವ ಇವ ನಮ್ಮವ' ಮಸೂದೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

SCROLL FOR NEXT