ನಿರ್ಮಾಣ ಹಂತದ ಕಟ್ಟಡ ಕುಸಿತ ಮುಂದುವರಿದ ರಕ್ಷಣಾ ಕಾರ್ಯಾಚರಣೆ 
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮತ್ತೊಬ್ಬ ಕಾರ್ಮಿಕನ ಶವಪತ್ತೆ; ಮೃತರ ಸಂಖ್ಯೆ ಐದಕ್ಕೆ ಏರಿಕೆ

ಸುಮಾರು 15 ಕಾರ್ಮಿಕರು ಈ ಬಿಲ್ಡಿಂಗ್‌ ನಿರ್ಮಾಣದಲ್ಲಿ ತೊಡಗಿದ್ದರು. ಬಹುತೇಕ ಕಟ್ಟಡ ನಿರ್ಮಾಣ ಮಾಡಿ, ಪೇಟಿಂಗ್‌ ಕೆಲಸಗಳು ನಡೆಯುತ್ತಿದ್ದವು ಎಂದು ವರದಿಯಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಇದುವರೆಗೂ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದೆ ಒಟ್ಟು ಐವರ ಶವ ಪತ್ತೆಯಾಗಿದೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳು ಸತತ 17 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗುತ್ತಿತ್ತು.

ಸುಮಾರು 15 ಕಾರ್ಮಿಕರು ಈ ಬಿಲ್ಡಿಂಗ್‌ ನಿರ್ಮಾಣದಲ್ಲಿ ತೊಡಗಿದ್ದರು. ಬಹುತೇಕ ಕಟ್ಟಡ ನಿರ್ಮಾಣ ಮಾಡಿ, ಪೇಟಿಂಗ್‌ ಕೆಲಸಗಳು ನಡೆಯುತ್ತಿದ್ದವು ಎಂದು ವರದಿಯಾಗಿದೆ. ಕಟ್ಟಡ ದಲ್ಲಿ ಸುಮಾರು ಹದಿನೈದು ಜನ ಕಾರ್ಮಿಕರಿದ್ದರುಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT