ಬೆಂಗಳೂರು ಕಟ್ಟಡ ಕುಸಿತ 
ರಾಜ್ಯ

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಪೊಲೀಸರಿಂದ ಮಾಲೀಕ ಹಾಗೂ ಗುತ್ತಿಗೆದಾರನ ಬಂಧನ

ಕಟ್ಟಡ ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬೆಂಗಳೂರು: ನಗರದ ಬಾಬುಸಾಬ್​ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಟ್ಟಡದ ಮಾಲೀಕ ಭುವನ್ ರೆಡ್ಡಿ, ಗುತ್ತಿಗೆದಾರ ಮುನಿಯಪ್ಪ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಟ್ಟಡ ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿನ ಶವ ಹೊರಗೆ ತೆಗೆದಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಬಿಹಾರ ಮೂಲದವಾರದ ಕಾರ್ಮಿಕ ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್​, ಸೋಲೋ ಪಾಸ್ವಾನ್ ಮೃತರು. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

NDRF, SDRF ಮತ್ತು ಅಗ್ನಿಶಾಮಕ ಸಿಬ್ಬಂದಿ‌ಯಿಂದ ಕಾರ್ಯಾಚರಣೆ ಮುಂದುವರೆದಿದೆ. ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾರ್ಯ ಕಳೆದ ಎಂಟು ತಿಂಗಳಿಂದ ನಡೆಯುತ್ತಿದೆ. ಆದರೆ, ಇದೀಗ ಏಕಾಏಕಿ ಕುಸಿದುಬಿದ್ದಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ಇದೀಗ ಹೆಣ್ಣೂರು ಪೊಲೀಸರು ಮಾಲೀಕನನ್ನು ಪತ್ತೆ ಹಚ್ಚಿ, ಬಂಧಿಸಿದ್ದಾರೆ. ಕಳಪೆ ಕಾಮಗಾರಿಯಿಂದಲೇ ಕಟ್ಟಡ ಬುಡಮೇಲಾಗಿ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!