ಬೆಂಗಳೂರು ಕಟ್ಟಡ ಕುಸಿತ 
ರಾಜ್ಯ

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಪೊಲೀಸರಿಂದ ಮಾಲೀಕ ಹಾಗೂ ಗುತ್ತಿಗೆದಾರನ ಬಂಧನ

ಕಟ್ಟಡ ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬೆಂಗಳೂರು: ನಗರದ ಬಾಬುಸಾಬ್​ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಟ್ಟಡದ ಮಾಲೀಕ ಭುವನ್ ರೆಡ್ಡಿ, ಗುತ್ತಿಗೆದಾರ ಮುನಿಯಪ್ಪ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಟ್ಟಡ ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿನ ಶವ ಹೊರಗೆ ತೆಗೆದಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಬಿಹಾರ ಮೂಲದವಾರದ ಕಾರ್ಮಿಕ ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್​, ಸೋಲೋ ಪಾಸ್ವಾನ್ ಮೃತರು. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

NDRF, SDRF ಮತ್ತು ಅಗ್ನಿಶಾಮಕ ಸಿಬ್ಬಂದಿ‌ಯಿಂದ ಕಾರ್ಯಾಚರಣೆ ಮುಂದುವರೆದಿದೆ. ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾರ್ಯ ಕಳೆದ ಎಂಟು ತಿಂಗಳಿಂದ ನಡೆಯುತ್ತಿದೆ. ಆದರೆ, ಇದೀಗ ಏಕಾಏಕಿ ಕುಸಿದುಬಿದ್ದಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ಇದೀಗ ಹೆಣ್ಣೂರು ಪೊಲೀಸರು ಮಾಲೀಕನನ್ನು ಪತ್ತೆ ಹಚ್ಚಿ, ಬಂಧಿಸಿದ್ದಾರೆ. ಕಳಪೆ ಕಾಮಗಾರಿಯಿಂದಲೇ ಕಟ್ಟಡ ಬುಡಮೇಲಾಗಿ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT