ಬೆಂಗಳೂರು ಕಟ್ಟಡ ಕುಸಿತ 
ರಾಜ್ಯ

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಪೊಲೀಸರಿಂದ ಮಾಲೀಕ ಹಾಗೂ ಗುತ್ತಿಗೆದಾರನ ಬಂಧನ

ಕಟ್ಟಡ ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬೆಂಗಳೂರು: ನಗರದ ಬಾಬುಸಾಬ್​ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಟ್ಟಡದ ಮಾಲೀಕ ಭುವನ್ ರೆಡ್ಡಿ, ಗುತ್ತಿಗೆದಾರ ಮುನಿಯಪ್ಪ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಟ್ಟಡ ಮಾಲೀಕ ಭುವನ್​ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿನ ಶವ ಹೊರಗೆ ತೆಗೆದಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಬಿಹಾರ ಮೂಲದವಾರದ ಕಾರ್ಮಿಕ ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್​, ಸೋಲೋ ಪಾಸ್ವಾನ್ ಮೃತರು. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

NDRF, SDRF ಮತ್ತು ಅಗ್ನಿಶಾಮಕ ಸಿಬ್ಬಂದಿ‌ಯಿಂದ ಕಾರ್ಯಾಚರಣೆ ಮುಂದುವರೆದಿದೆ. ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾರ್ಯ ಕಳೆದ ಎಂಟು ತಿಂಗಳಿಂದ ನಡೆಯುತ್ತಿದೆ. ಆದರೆ, ಇದೀಗ ಏಕಾಏಕಿ ಕುಸಿದುಬಿದ್ದಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ಇದೀಗ ಹೆಣ್ಣೂರು ಪೊಲೀಸರು ಮಾಲೀಕನನ್ನು ಪತ್ತೆ ಹಚ್ಚಿ, ಬಂಧಿಸಿದ್ದಾರೆ. ಕಳಪೆ ಕಾಮಗಾರಿಯಿಂದಲೇ ಕಟ್ಟಡ ಬುಡಮೇಲಾಗಿ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT