ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಕೆಂಗೇರಿ ಕೆರೆಯಲ್ಲಿ ಮುಳುಗಿದ ಮಕ್ಕಳ ಕುಟುಂಬಕ್ಕೆ 5 ಲಕ್ಷ ರೂ, ಮಳೆಯಿಂದ ಹಾನಿಗೊಳಗಾದವರಿಗೆ ತಲಾ 10 ಸಾವಿರ ಪರಿಹಾರ: DCM

ನಗರದಾದ್ಯಂತ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದ್ದು, ಈಗಾಗಲೇ ವಿಶ್ವಬ್ಯಾಂಕ್‌ನಿಂದ 1000 ಕೋಟಿ ರೂಪಾಯಿ ಸಾಲ ಪಡೆದು ಮಳೆನೀರು ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಬೆಂಗಳೂರು: ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಎರಡು ದಿನಗಳ ನಂತರ ಮೃತರ ಕುಟುಂಬಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಕೆಂಗೇರಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಮಕ್ಕಳ ಕುಟುಂಬಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಐದು ಲಕ್ಷ ರೂಪಾಯಿ ಪರಿಹಾರ ನೀಡಲಿದ್ದು, ಮಳೆ ನೀರಿನ ಪರಿಣಾಮವಾಗಿ ಮನೆಗೆ ಹಾನಿ ಎದುರಿಸಿರುವ ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ವಸತಿ ರಹಿತರಿಗೆ ತಾತ್ಕಾಲಿಕ ವಸತಿ ಮತ್ತು ಆಹಾರದ ವ್ಯವಸ್ಥೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ (ಅ.21) ರಂದು ಸಂಜೆ ಮಹಾಲಕ್ಷ್ಮಿ (11 ವರ್ಷ) ಮತ್ತು ಆಕೆಯ ಸಹೋದರ ಜಾನ್ ಶ್ರೀನಿವಾಸ್ (13) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಪೋಲೀಸರ ಪ್ರಕಾರ, ಮಹಾಲಕ್ಷ್ಮಿ ಪಾಟ್ ತರಲು ಹೋಗಿ ಕೆರೆಯಲ್ಲಿ ಬಿದ್ದು ಮುಳುಗಿದ್ದರು. ರಕ್ಷಿಸಲು ಹೋದ ಆಕೆಯ ಸಹೋದರ ಕೂಡ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ.

ನಗರದಾದ್ಯಂತ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದ್ದು, ಈಗಾಗಲೇ ವಿಶ್ವಬ್ಯಾಂಕ್‌ನಿಂದ 1000 ಕೋಟಿ ರೂಪಾಯಿ ಸಾಲ ಪಡೆದು ಮಳೆನೀರು ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಶಿವಕುಮಾರ್ ನಗರಸಭೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಯಲಹಂಕದ ಕೇಂದ್ರೀಯ ವಿಹಾರ ವಸತಿ ಸಂಕೀರ್ಣ, ಬೈತರಾಯನಪುರದ ಮರಿಯಣ್ಣಪಾಳ್ಯ, ಹೊರಮಾವು ವಾರ್ಡ್‌ನ ಕೆಆರ್ ಪುರಂನ ಶ್ರೀ ಸಾಯಿ ಲೇಔಟ್‌ಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದರು.

ಪರಿಹಾರ ಕಾರ್ಯವನ್ನು ಪರಿಶೀಲಿಸಿದ ಅವರು, ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘದ ಸದಸ್ಯರೊಂದಿಗೆ ಪರಿಸ್ಥಿತಿ ಕುರಿತು ಚರ್ಚಿಸಿದರು. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಯೊಂದಿಗೆ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಸ್ಥಳಾಂತರಗೊಂಡ ನಿವಾಸಿಗಳಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜಕಾಲುವೆ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಡಿಸಿಎಂ ಮಾಹಿತಿ ನೀಡಿದರು. ಎನ್‌ಡಿಆರ್‌ಎಫ್ ಅನುದಾನ ಸೇರಿದಂತೆ ವಿವಿಧ ಯೋಜನೆಗಳಡಿ ಕೆರೆಗಳ ಸ್ವಚ್ಛತೆ ಮತ್ತು ಹೂಳು ತೆಗೆಯಲಾಗುವುದು. ಸದ್ಯದಲ್ಲೇ ಕೆರೆ ನಿರ್ವಹಣಾ ಸಮಿತಿ ಸಭೆ ಕರೆಯಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಹುಲ್ ವಿರುದ್ಧ 'ಕಿರುಚುವ' ಬದಲು ತನಿಖೆಗೆ ಆದೇಶಿಸಬೇಕಿತ್ತು: 'ಮತ ಕಳ್ಳತನ' ಆರೋಪದ ಬಗ್ಗೆ ಮಾಜಿ ಸಿಇಸಿ

ಸಾಲಬಾಧೆಯಿಂದ ನೊಂದ ಕುಟುಂಬ ಆತ್ಮಹತ್ಯೆ ಯತ್ನ: ಗಂಡ- ಮಕ್ಕಳ ಕತ್ತು ಹಿಸುಕಿ ಕೊಂದ ತಾಯಿ; ಮೂವರ ಸಾವು

Thailand safari park: ಜೀಪ್ ನಿಂದ ಇಳಿದ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳು! Video

ಕ್ಷಮಿಸಿ, ಇನ್ಮುಂದೆ ನಿಮಗೆ ತೊಂದರೆ ಕೊಡಲ್ಲ: ಮಗನ ಮಾನಸಿಕ ಅಸ್ವಸ್ಥತೆ; 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!

'ಆಪರೇಷನ್ ಸಿಂದೂರ್ ಸಮಯದಲ್ಲಿ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಬಂಕರ್ ನಲ್ಲಿ ಅಡಗಿ ಕುಳಿತಿದ್ದರು': ನಿವೃತ್ತ ಲೆ.ಜ. ಕೆಜೆಎಸ್ ಧಿಲ್ಲೋನ್

SCROLL FOR NEXT