ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್ 
ರಾಜ್ಯ

ವರುಣನ ಅಬ್ಬರಕ್ಕೆ ಕೋಟೆನಾಡು ಚಿತ್ರದುರ್ಗ ತತ್ತರ: ಕೊಚ್ಚಿ ಹೋದ ಟ್ರ್ಯಾಕ್ಟರ್, ಠಾಣೆಗೆ ನುಗ್ಗಿದ ನೀರು!

ಹೊರಮಠದ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನವೂ ಮುಳುಗಡೆಯಾಗಿದೆ. ಸೋಮವಾರ ರಾತ್ರಿ ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ.

ಚಿತ್ರದುರ್ಗ: ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆ ತತ್ತರಿಸಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹಾಗೂ ಸುತ್ತಮುತ್ತಲ ಪ್ರದೇಶಗಳು ರಾತ್ರಿಯಿಡೀ ಜಲಾವೃತಗೊಂಡಿದ್ದರಿಂದ ತೀವ್ರ ತೊಂದರೆ ಎದುರಾಯಿತು.

ನಾಯಕನಹಟ್ಟಿಯ ಚಿಕ್ಕಕೆರೆಯಿಂದ ನೀರು ಹರಿದು ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಗೆ ನೀರು ನುಗ್ಗಿದ್ದು, ಠಾಣೆ ಕೆರೆಯಂತಾಗಿದೆ. ಇದರಿಂದ ಅಕ್ಷರಶಃ ಪೋಲೀಸ್ ಠಾಣೆ ಕಟ್ಟಡ ನೀರಿನಿಂದ ತುಂಬಿಕೊಂಡಿದೆ. ಇದಲ್ಲದೆ ಮನೆ, ಅಂಗಡಿ ಮುಂಗಟ್ಟುಗಳಿಗೂ ನೀರು ನುಗ್ಗಿದೆ. ಇದರೊಂದಿಗೆ ಹೊರಮಠದ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನವೂ ಮುಳುಗಡೆಯಾಗಿದೆ. ಸೋಮವಾರ ರಾತ್ರಿ ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ.

ಮಳೆಯ ನೀರಿನಿಂದ ಠಾಣೆಯಲ್ಲಿ ಮೊಳಕಾಲುದ್ದ ನೀರು ನಿಂತಿತ್ತು. ಹೀಗಾಗಿ ನೀರು ನುಗ್ಗಿದ್ದರಿಂದ ಕಚೇರಿಯೊಳಗಿನ ದಾಖಲೆಗಳನ್ನು ರಕ್ಷಿಸಲು ಪೊಲೀಸರಿಗೆ ತೊಂದರೆಯಾಯಿತು. ದೇವರಹಟ್ಟಿಗೆ ತೆರಳುತ್ತಿದ್ದ ನಾಲ್ಕು ಜನರಿದ್ದ ಕಾರು ನಾಯಕನಹಟ್ಟಿ ಗ್ರಾಮದ ಬಳಿ ಕೊಚ್ಚಿ ಹೋಗಿದೆ. ಆದರೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಅಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT