ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್ 
ರಾಜ್ಯ

ವರುಣನ ಅಬ್ಬರಕ್ಕೆ ಕೋಟೆನಾಡು ಚಿತ್ರದುರ್ಗ ತತ್ತರ: ಕೊಚ್ಚಿ ಹೋದ ಟ್ರ್ಯಾಕ್ಟರ್, ಠಾಣೆಗೆ ನುಗ್ಗಿದ ನೀರು!

ಹೊರಮಠದ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನವೂ ಮುಳುಗಡೆಯಾಗಿದೆ. ಸೋಮವಾರ ರಾತ್ರಿ ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ.

ಚಿತ್ರದುರ್ಗ: ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆ ತತ್ತರಿಸಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹಾಗೂ ಸುತ್ತಮುತ್ತಲ ಪ್ರದೇಶಗಳು ರಾತ್ರಿಯಿಡೀ ಜಲಾವೃತಗೊಂಡಿದ್ದರಿಂದ ತೀವ್ರ ತೊಂದರೆ ಎದುರಾಯಿತು.

ನಾಯಕನಹಟ್ಟಿಯ ಚಿಕ್ಕಕೆರೆಯಿಂದ ನೀರು ಹರಿದು ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಗೆ ನೀರು ನುಗ್ಗಿದ್ದು, ಠಾಣೆ ಕೆರೆಯಂತಾಗಿದೆ. ಇದರಿಂದ ಅಕ್ಷರಶಃ ಪೋಲೀಸ್ ಠಾಣೆ ಕಟ್ಟಡ ನೀರಿನಿಂದ ತುಂಬಿಕೊಂಡಿದೆ. ಇದಲ್ಲದೆ ಮನೆ, ಅಂಗಡಿ ಮುಂಗಟ್ಟುಗಳಿಗೂ ನೀರು ನುಗ್ಗಿದೆ. ಇದರೊಂದಿಗೆ ಹೊರಮಠದ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನವೂ ಮುಳುಗಡೆಯಾಗಿದೆ. ಸೋಮವಾರ ರಾತ್ರಿ ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ.

ಮಳೆಯ ನೀರಿನಿಂದ ಠಾಣೆಯಲ್ಲಿ ಮೊಳಕಾಲುದ್ದ ನೀರು ನಿಂತಿತ್ತು. ಹೀಗಾಗಿ ನೀರು ನುಗ್ಗಿದ್ದರಿಂದ ಕಚೇರಿಯೊಳಗಿನ ದಾಖಲೆಗಳನ್ನು ರಕ್ಷಿಸಲು ಪೊಲೀಸರಿಗೆ ತೊಂದರೆಯಾಯಿತು. ದೇವರಹಟ್ಟಿಗೆ ತೆರಳುತ್ತಿದ್ದ ನಾಲ್ಕು ಜನರಿದ್ದ ಕಾರು ನಾಯಕನಹಟ್ಟಿ ಗ್ರಾಮದ ಬಳಿ ಕೊಚ್ಚಿ ಹೋಗಿದೆ. ಆದರೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಅಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT