ಹಾಸನಾಂಬ ದೇವಾಲಯ TNIE Photo
ರಾಜ್ಯ

ಹಾಸನಾಂಬ ದೇವಾಲಯದ ಬಾಗಿಲು ಇಂದು ಓಪನ್​: 9 ದಿನ ದರ್ಶನಕ್ಕೆ ಅವಕಾಶ

ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.

ಹಾಸನ: ಗುರುವಾರ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಮುಖ್ಯ ಅರ್ಚಕ ನಾಗರಾಜ್ ನೇತೃತ್ವದ ಎಂಟು ಪುರೋಹಿತರ ಗುಂಪಿನ ನಿರಂತರ ಧಾರ್ಮಿಕ ಕ್ರಿಯೆಗಳ ನಡುವೆ ಪ್ರಸಿದ್ಧ ಅಧಿದೇವತೆ ಹಾಸನಾಂಬ ದೇವಸ್ಥಾನದ ಬಾಗಿಲು ತೆರೆಯಲಿದೆ.

ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ. ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.

ಹಾಸನಾಂಬ ದೇವಾಲಯ

ಸಾಮಾನ್ಯ ಸರತಿ ಸಾಲು, ವಿಐಪಿ ಪಾಸ್ ಹೊಂದಿರುವ ಭಕ್ತರು ಮತ್ತು ವಿಐಪಿಗಳ ವಾಹನಗಳಿಗೆ ಪ್ರವೇಶ ಮತ್ತು ನಿರ್ಗಮನ ಜಿಲ್ಲಾಡಳಿತ ವ್ಯವಸ್ಥಿತಗೊಳಿಸಿದೆ. ಎಲ್ಲಾ ಭಕ್ತರಿಗೆ ಲಡ್ಡು ಮತ್ತು ಪ್ರಸಾದವನ್ನು ವಿತರಿಸಲು ದೇವಾಲಯದ ಪಕ್ಕದಲ್ಲಿ 24 ಕೌಂಟರ್‌ಗಳನ್ನು ಸ್ಥಾಪಿಸಿದೆ. ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಸಿದ್ದಗಂಗಾ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಲಿದ್ದಾರೆ. ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಈ ನಡುವೆ ನೈವೇದ್ಯದ ಸಂದರ್ಭ ಹೊರತು ಪಡಿಸಿ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶವಿರುತ್ತದೆ” ಎಂದು ದೇಗುಲದ ಪ್ರಧಾನ ಅರ್ಚಕರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

SCROLL FOR NEXT