ಪ್ರಧಾನಿ ನರೇಂದ್ರ ಮೋದಿ  
ರಾಜ್ಯ

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ; ಪ್ರಧಾನಿ ಮೋದಿ ಘೋಷಣೆ

ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಬೆಂಗಳೂರು: ನಗರದ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ.

ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಏತನ್ಮಧ್ಯೆ, ಬುಧವಾರ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಘಟನೆಯ ಸ್ಥಳದಿಂದ ಒಟ್ಟು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ಮಧ್ಯಾಹ್ನ 3:40ರ ಸುಮಾರಿಗೆ ನಗರದಲ್ಲಿ ಸುರಿದ ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದಿರುವ ಕಾರ್ಮಿಕರನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ತುರ್ತು ಸೇವಾ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ