ವರ್ತೂರು ಕೆರೆ( ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರು: ವರ್ತೂರು ಕೆರೆಯಲ್ಲಿ 19 ವರ್ಷದ ಯುವಕ ಕೊಚ್ಚಿ ಹೋಗಿ ದುರಂತ

ವರ್ತೂರು ಬಳಿಯ ಶೆಡ್‌ಗಳಲ್ಲಿ ವಾಸಿಸುವ ಇಝರುಲ್ ತಮ್ಮ ಇಬ್ಬರು ಚಿಕ್ಕಪ್ಪಂದಿರ ಜೊತೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೊಳೆ ಬಳಿ ಪ್ಲಾಸ್ಟಿಕ್ ತ್ಯಾಜ್ಯದ ಬಾಟಲಿಗಳು ಮತ್ತು ಚೀಲಗಳನ್ನು ಎಸೆಯಲು ಹೋಗಿದ್ದರು.

ಬೆಂಗಳೂರು: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ 19 ವರ್ಷದ ಯುವಕ ಗುರುವಾರ ಬೆಳಗ್ಗೆ ವರ್ತೂರು ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ.

ಇಝಾರುಲ್ ಎಸ್.ಕೆ ಎಂಬಾತ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸುತ್ತಿದ್ದ ವೇಳೆ ವರ್ತೂರು ಕೆರೆಯಲ್ಲಿ ಕೊಚ್ಚಿ ಹೋಗಿದ್ದಾನೆ. ವರ್ತೂರು ಬಳಿಯ ಶೆಡ್‌ಗಳಲ್ಲಿ ವಾಸಿಸುವ ಇಝರುಲ್ ಮತ್ತು ಅವರ ಇಬ್ಬರು ಚಿಕ್ಕಪ್ಪಂದಿರ ಜೊತೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೊಳೆ ಬಳಿ ಪ್ಲಾಸ್ಟಿಕ್ ತ್ಯಾಜ್ಯದ ಬಾಟಲಿಗಳು ಮತ್ತು ಚೀಲಗಳನ್ನು ಎಸೆಯಲು ಹೋಗಿದ್ದರು ಎಂದು ಸ್ವರಾಜ್ ಅಭಿಯಾನ್ ಎನ್‌ಜಿಒ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಆರ್ ಕಲೀಮುಲ್ಲಾ ತಿಳಿಸಿದ್ದಾರೆ.

ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಳೆ ಉಕ್ಕಿ ಹರಿಯುತ್ತಿತ್ತು. ಇಝರುಲ್ ಅವರ ಚಿಕ್ಕಪ್ಪರು ಅವನನ್ನುತುಂಬಿ ಹರಿಯುತ್ತಿದ್ದ ಹೊಳೆಯಿಂದ ರಿಸಲು ಪ್ರಯತ್ನಿಸಿದರು, ಆದರೆ ಸಾಧ್ಯವಾಗಲಿಲ್ಲ. ಶೋಧ ಕಾರ್ಯಾಚರಣೆ ಆರಂಭಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮತ್ತು ಬಿಬಿಎಂಪಿ ಸಿಬ್ಬಂದಿ ಕತ್ತಲೆಯಾದ ಕಾರಣ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಿದರು. ಶುಕ್ರವಾರ ಶೋಧವನ್ನು ಪುನರಾರಂಭಿಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT