ಕಟ್ಟಡ ಕುಸಿತಗೊಂಡಿರುವ ಸ್ಥಳ. 
ರಾಜ್ಯ

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ ಮತ್ತೊಂದು ಮೃತದೇಹ ಪತ್ತೆ, ಮೃತರ ಸಂಖ್ಯೆ 9ಕ್ಕೆ ಏರಿಕೆ!

6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತರಾದ ಘಟನೆ ಮಂಗಳವಾರ ಮಧ್ಯಾಹ್ನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿತ್ತು.

ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಇಂದು ನಡೆದ ಅವಶೇಷ ತೆರವು ಕಾರ್ಯಾಚರಣೆ ವೇಳೆ ಮತ್ತೋರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಏಳುಮಲೈ ಎಂದು ಗುರ್ತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತರಾದ ಘಟನೆ ಮಂಗಳವಾರ ಮಧ್ಯಾಹ್ನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿತ್ತು. ಘಟನೆ ಬೆನ್ನಲ್ಲೇ ಅಗ್ನಿಶಾಮಕ ಮತ್ತು ತುರ್ತು ವಿಭಾಗ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಪೊಲೀಸರು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಹೆಣ್ಣೂರು ಠಾಣೆ ಪೊಲೀಸರು ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿ, ಇವರ ಪುತ್ರ ಭುವನ್ ರೆಡ್ಡಿಯನ್ನು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೆ, ಕಟ್ಟಡದ 4ನೇ ಅಂತಸ್ತಿನವರೆಗೂ ನಿರ್ಮಾಣದ ಜವಾಬ್ದಾರಿ ವಹಿಸಿದ್ದ ಗುತ್ತಿಗೆದಾರ ಮುನಿಯಪ್ಪನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT