ಸಾಂದರ್ಭಿಕ ಚಿತ್ರ 
ರಾಜ್ಯ

BMTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸಾವು

ಬುಧವಾರ ರಾತ್ರಿ 8.30ರ ಸುಮಾರಿಗೆ ಡಿಪೋ ನಂ.37 ಗೆ ಸೇರಿದ ಬಿಎಂಟಿಸಿ ಬಸ್ (ಕೆಎ-57-ಎಫ್-3615) ಮಾರ್ಗ ನಂ. 375 H/5 ಶಿರ್ಕೆ ಅಪಾರ್ಟ್‌ಮೆಂಟ್‌ನಿಂದ ಜಯನಗರಕ್ಕೆ ತೆರಳುತ್ತಿತ್ತು.

ಬೆಂಗಳೂರು: ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಿಎಂಟಿಸಿ ಬಸ್'ಗೆ ಸಿಲುಕಿ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ವಿಷ್ಣುವರ್ಧನ್ ರಸ್ತೆಯ ಬಿಜಿಎಸ್ ಬಸ್ ನಿಲ್ದಾಣದ ಬಳಿ ಬುಧವಾರ ರಾತ್ರಿ ನಡೆದಿದೆ.

ಮೃತರನ್ನು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಡಿವಾಳ ನಿವಾಸಿ ಆನಂದ್ (36) ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ 8.30ರ ಸುಮಾರಿಗೆ ಡಿಪೋ ನಂ.37 ಗೆ ಸೇರಿದ ಬಿಎಂಟಿಸಿ ಬಸ್ (ಕೆಎ-57-ಎಫ್-3615) ಮಾರ್ಗ ನಂ. 375 H/5 ಶಿರ್ಕೆ ಅಪಾರ್ಟ್‌ಮೆಂಟ್‌ನಿಂದ ಜಯನಗರಕ್ಕೆ ತೆರಳುತ್ತಿತ್ತು.

ಆನಂದ್ ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವಾಗ ಎದುರಿಗೆ ಬಂದ ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ನಡುವೆ ಮೃತರ ಕುಟುಂಬಕ್ಕೆ ಮಧ್ಯಂತರ ಪರಿಹಾರ ನೀಡಿರುವುದಾಗಿ ಬಿಎಂಟಿಸಿ ಪ್ರಕಟಣೆ ತಿಳಿಸಿದೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

ದಶಕಗಳ ಪ್ರಯತ್ನಕ್ಕೆ Trump ಕೊಳ್ಳಿ ಇಟ್ಟಿದ್ದಾರೆ: ಅಧ್ಯಕ್ಷನ ಆತುರ ನಿರ್ಧಾರಗಳೇ ಭಾರತ-ರಷ್ಯಾ-ಚೀನಾ ದೋಸ್ತಿಗೆ ಕಾರಣ!

SCROLL FOR NEXT