ಸಾಂದರ್ಭಿಕ ಚಿತ್ರ 
ರಾಜ್ಯ

16.5 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ಇಬ್ಬರು BESCOM ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಠಾಣೆ ಮೊಸಂ: 16/2024 ಕಲಂ 7(a) ಪಿ.ಸಿ ಕಾಯ್ದೆ 1988 (ತಿದ್ದುಪಡಿ 2018) ರಂತೆ ಪ್ರಕರಣ ದಾಖಲಾಗಿತ್ತು.

ಬೆಂಗಳೂರು: ವಿದ್ಯುತ್ ಸಂಪರ್ಕ ನೀಡಲು 16.50 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಬೆಸ್ಕಾಂ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಸ್ಕಾಂ ಅವಲಹಳ್ಳಿ ಕಛೇರಿಯ ಎಇಇ ರಮೇಶ್ ಬಾಬು ಮತ್ತು ಸೆಕ್ಷನ್ ಆಫಿಸರ್ ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಪಿ. ಮುತ್ತುಸ್ವಾಮಿ ಎಂಬುವರ ಮಾಲೀಕತ್ವದ ಬೊಮ್ಮನಹಳ್ಳಿ ಗ್ರಾಮದ ಸರ್ವೆ ನಂ. 101/33, 149 ಜಮೀನಿನಲ್ಲಿ ನಿರ್ಮಾಣ ಮಾಡಿರುವ ಲೇಔಟ್‌ ಗೆ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಶ್ರೀ ಚಕ್ರ ಎಲೆಕ್ಟಿಕಲ್ಸ್ ರವರೊಂದಿಗೆ ಒಪ್ಪಂದವಾಗಿತ್ತು.

ಶ್ರೀ ಚಕ್ರ ಎಲೆಕ್ಟಿಕಲ್‌ ನ ಸೀನಿಯರ್ ಮ್ಯಾನೇಜರ್ ವಿಜಯಕುಮಾರ್ ರವರು ಈ ಬಗ್ಗೆ ದಿನಾಂಕ: 25/09/2024 ರಂದು ಬೆಸ್ಕಾಂ ಅವಲಹಳ್ಳಿ ಕಚೇರಿಯ ಎಇಇ ರಮೇಶ್ ಬಾಬು ರವರನ್ನು ಭೇಟಿ ಮಾಡಿ ವಿಚಾರ ಮಾಡಿದ್ದರು. ಆಗ ಈ ಕೆಲಸಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದಾಗಿ ಸೆಕ್ಷನ್ ಆಫೀಸರ್ ನಾಗೇಶ್ ರವರು ಹೇಳುತ್ತಾರೆ ಅವರನ್ನು ಭೇಟಿಯಾಗಿ ಎಂದಿದ್ದರು. ಅಲ್ಲಿಯವರೆಗೆ ಫೈಲ್ ಪೆಂಡಿಂಗ್ ಇಟ್ಟಿರುವುದಾಗಿ ತಿಳಿಸಿದ್ದರು.

ಈ ನಡುವೆ ವಿಜಯಕುಮಾರ್ ಅದೇ ದಿನ ಸೆಕ್ಷನ್ ಆಫಿಸರ್ ನಾಗೇಶ್ ಅವರನ್ನು ಭೇಟಿ ಮಾಡಿದಾಗ ನಾಗೇಶ್ ಅವರು 16.50 ಲಕ್ಷ ರೂಪಾಯಿಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಕುರಿತು ವಿಜಯ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಠಾಣೆ ಮೊಸಂ: 16/2024 ಕಲಂ 7(a) ಪಿ.ಸಿ ಕಾಯ್ದೆ 1988 (ತಿದ್ದುಪಡಿ 2018) ರಂತೆ ಪ್ರಕರಣ ದಾಖಲಾಗಿತ್ತು.

ಈ ಮಧ್ಯೆ ಗುರುವಾರ (ಅಕ್ಟೋಬರ್24) ಎಇಇ ರಮೇಶ್ ಬಾಬು ಅವರ ಸೂಚನೆಯಂತೆ ಜೆ.ಇ ನಾಗೇಶ್ ಅವರು ಪಿರ್ಯಾದುದಾರರಿಂದ ಬೊಮ್ಮೇನಹಳ್ಳಿಯ ನ್ಯೂ ರಾಯಲ್ ಪ್ರೆಷ್ ಮಾರ್ಟ್ ಬಳಿ ಲಂಚದ ಹಣವನ್ನು ಪಡೆಯುವಾಗ ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಟ್ರ್ಯಾಪ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಣವನ್ನ ವಶಕ್ಕೆ ಪಡೆದಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

ಬರೋಬ್ಬರಿ 10 ಕೋಟಿ ರೂ. ಲಂಚ: ಗುಜರಾತ್ ಐಎಎಸ್ ಅಧಿಕಾರಿಯನ್ನು ಬಂಧಿಸಿದ ED

Himachal Pradesh: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

SCROLL FOR NEXT