ಕಾರ್ಯಕ್ರಮ ಉದ್ಘಾಟಿಸಿದ ಜಗದೀಪ್ ಧನಕರ್ 
ರಾಜ್ಯ

ನಿರ್ಗತಿಕರಿಗೆ, ದುರ್ಬಲರಿಗೆ ದಾನ ಮಾಡಲು ಕಟ್ಟುಪಾಡುಗಳು ಇರಬಾರದು: ಉಪರಾಷ್ಟ್ರಪತಿ ಧನಕರ್

ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ.ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜಗದೀಪ್ ಧನಕರ್ ಮಾತನಾಡಿದರು.

ಮಂಡ್ಯ: ಫಲಾನುಭವಿಯ ನಂಬಿಕೆಯ ಮೇಲೆ ಪ್ರಭಾವ ಬೀರಲು ದಾನದ ರಚನಾತ್ಮಕ ಬಳಕೆಯು ಪ್ರಜಾಪ್ರಭುತ್ವದಲ್ಲಿ ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ.ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಧನಕರ್ ಅವರು, ನಿರ್ಗತಿಕರಿಗೆ, ಅಂಚಿನಲ್ಲಿರುವವರಿಗೆ ಮತ್ತು ದುರ್ಬಲರಿಗೆ ಸಹಾಯ ಮಾಡಲು ಯಾವುದೇ ಕಟ್ಟುಪಾಡುಗಳು ಇರಬಾರದು ಎಂದರು.

"ದಾನ, ನೆರವು ಅಥವಾ ಅಂತಹ ಕೈಹಿಡಿಯುವಿಕೆಯು ಯಾವುದೇ ಕಟ್ಟುಪಾಡುಗಳಿಲ್ಲದೆ ಇರಬೇಕು. ನಮ್ಮ ನಾಗರಿಕತೆಯ ನೀತಿಯು ಎಂದಿಗೂ ದಾನದ ಬಗ್ಗೆ ಮಾತನಾಡುವುದಿಲ್ಲ. ದಾನ ಮಾಡಿರುವುದನ್ನು ಎಂದಿಗೂ ಹೇಳಿಕೊಳ್ಳುವುದಿಲ್ಲ. ನೀವು ಅದನ್ನು ಮಾಡುತ್ತೀರಿ ಮತ್ತು ಮರೆತುಬಿಡುತ್ತೀರಿ" ಎಂದು ಧನಕರ್ ಹೇಳಿದರು.

ದೇಶದ ಜಿಡಿಪಿ ಹೆಚ್ಚಳವಾಗಿದ್ದು, ಆರ್ಥಿಕತೆಯಲ್ಲಿ ಪ್ರಗತಿ ಸಾಧಿಸಿ ದಾಪುಗಾಲು ಇಡುತ್ತಿದ್ದೇವೆ. ಭ್ರಷ್ಟಾಚಾರಕ್ಕೆ ಬಹುತೇಕ ಕಡಿವಾಣ ಬಿದ್ದಿದೆ. ದೇಶದಲ್ಲಿ ಅವಕಾಶಗಳ ಬಾಗಿಲು ತೆರೆದಿದ್ದು, ಯುವಕರು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಇದು ಸದವಕಾಶ ಎಂದು ಉಪ ರಾಷ್ಟ್ರಪತಿಗಳು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ, ಸ್ವಾಮೀಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT