ಹಾಸನದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹಾಸನಾಂಬ ದೇಗುಲಕ್ಕೆ ಭೇಟಿ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್. 
ರಾಜ್ಯ

ಹಾಸನಾಂಬೆ ದರ್ಶನ ಪಡೆದ ಡಿಕೆಶಿ: ರಾಜ್ಯದ ಜನರಿಗೆ ಆರೋಗ್ಯ, ಐಶ್ವರ್ಯಕ್ಕಾಗಿ ಪ್ರಾರ್ಥನೆ

ಇದೇ ವೇಳೆ ರಾಜಕೀಯ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಅವರು, 3 ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ಈಗ ಮಾತನಾಡಲ್ಲ ಎಂದು ತಿಳಿಸಿದರು.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಕುಟುಂಬ ಸಮೇತ ಹಾಸನಾಂಬೆ ದರ್ಶನ ಪಡೆದುಕೊಂಡಿದ್ದು, ಈ ವೇಳೆ ವಿಶೇಷ ಪೂಜೆ ಸಲ್ಲಿಸಿದರು.

ಹಾಸನಾಂಬೆ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಾಯಿ ಹಾಸನಾಂಬೆ ದರ್ಶನಕ್ಕೆ ಬಂದಿದ್ದೇನೆ. ಈ ವರ್ಷ ತಾಯಿ ಕೃಪೆಯಿಂದ ಮಳೆ-ಬೆಳೆ ಉತ್ತಮವಾಗಿದೆ. ರಾಜ್ಯದ ಜನರಿಗೆ ನೆಮ್ಮದಿಯನ್ನ ತಾಯಿ ಕೊಟ್ಟಿದ್ದಾರೆ. ರಾಜ್ಯದ ಜನತೆಗೆ ಉತ್ತಮ ಆರೋಗ್ಯ, ಐಶ್ವರ್ಯ ನೀಡಲಿ ಎಂದು ಪ್ರಾರ್ಥನೆ ಮಾಡಿದ್ದೇವೆ. ಜಿಲ್ಲಾಡಳಿತ ಹಾಸನಾಂಬೆ ದರ್ಶನ ಚೆನ್ನಾಗಿ ಮಾಡಿದೆ ಎಂದು ಹೇಳಿದರು.

ಇದೇ ವೇಳೆ ರಾಜಕೀಯ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಅವರು, 3 ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ಈಗ ಮಾತನಾಡಲ್ಲ ಎಂದು ತಿಳಿಸಿದರು.

ಹಾಸನಾಂಬೆ ಶಕ್ತಿಶಾಲಿ ದೇವತೆಯಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯ ರಕ್ಷಣೆಯನ್ನು ಮಾಡುತ್ತಾಳೆ, ಪ್ರತಿಯೊಬ್ಬ ನಾಗರಿಕನ ಶಾಂತಿ, ಶಕ್ತಿ ಮತ್ತು ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸಿದ್ದೇನೆ. ರಾಜ್ಯದಲ್ಲಿಯೂ ಉತ್ತಮ ಮಳೆಯಾಗಿದೆ, ಇದು ರೈತರಿಗೆ ಸಹಾಯ ಮಾಡಿದೆ, ಎಲ್ಲರಿಗೂ ದೇವಿಯ ಆಶೀರ್ವಾದವಿದೆ ಎಂದು ಹೇಳಿದರು.

ಬಳಿಕ ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತ ಮಾಡಿರುವ ವ್ಯವಸ್ಥೆಗೆ ಡಿಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಡಿಕೆ.ಶಿವಕುಮಾರ್ ಹಾಗೂ ಅವರ ಪತ್ನಿಗೆ ಶಾಲು ಹೊದಿಸಿ, ಏಲಕ್ಕಿ ಮಾಲೆ, ಹಣ್ಣುಹಂಪಲು ನೀಡಿ ಸನ್ಮಾನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT