ಭೂಮಿ ವಶಕ್ಕೆ ಪಡೆಯುತ್ತಿರುವ ಅರಣ್ಯ ಇಲಾಖೆ. 
ರಾಜ್ಯ

HMT ಯಿಂದ 5 ಎಕರೆ ಭೂಮಿ ಮರು ವಶ: ಅರಣ್ಯ ಇಲಾಖೆ

ಎಚ್‍ಎಂಟಿ ವಶದಲ್ಲಿದ್ದ ಪೀಣ್ಯ-ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಶುಕ್ರವಾರ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ, ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದು, ಅಲ್ಲಿ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

ಬೆಂಗಳೂರು: ಪೀಣ್ಯ-ಜಾಲಹಳ್ಳಿ ಸರ್ವೆ ನಂ.1ರಲ್ಲಿ ಹಲವು ಕೋಟಿ ರೂಪಾಯಿ ಮೌಲ್ಯದ 5 ಎಕರೆ ಖಾಲಿ ಭೂಮಿಯನ್ನು ಅರಣ್ಯ ಇಲಾಖೆ ಎಚ್‌ಎಂಟಿಯಿಂದ ಮರುವಶಕ್ಕೆ ಪಡೆದಿದೆ.

ಎಚ್‍ಎಂಟಿ ವಶದಲ್ಲಿದ್ದ ಪೀಣ್ಯ-ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಶುಕ್ರವಾರ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ, ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದು, ಅಲ್ಲಿ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

1896ರ ಮೇ 29ರ ಸರಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದ್ದರು.

ಸದರಿ ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್‍ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐಎ) ಹಿಂಪಡೆಯಲೂ ಸೂಚನೆ ನೀಡಿದ್ದರು. ಈ ಮಧ್ಯೆ ಎಚ್‍ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂ.ಗೆ ಖಾಸಗಿ ಮತ್ತು ಸರಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್‍ಬಾಗ್, ಕಬ್ಬನ್ ಪಾರ್ಕ್‍ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಈಶ್ವರ ಖಂಡ್ರೆ ಅವರು ವ್ಯಕ್ತಪಡಿಸಿದ್ದರು.. ಈ ನಿಟ್ಟಿನಲ್ಲಿ ಅಧಿಕಾರಿಗಳು ಶುಕ್ರವಾರ ಪ್ರಥಮ ಹೆಜ್ಜೆ ಇಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!