ಸಿಎಂ ಸಿದ್ದರಾಮಯ್ಯ 
ರಾಜ್ಯ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್!

ಪ್ರಕರಣದ ಎರಡನೇ ಆರೋಪಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೇಳಿಕೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ನಂತರ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಲಿದ್ದಾರೆ ಎನ್ನಲಾಗಿದೆ.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರು ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮನ್ಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಪ್ರಕರಣದ ಎರಡನೇ ಆರೋಪಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೇಳಿಕೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ನಂತರ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಲಿದ್ದಾರೆ ಎನ್ನಲಾಗಿದೆ.

ಮೂರನೇ ಆರೋಪಿ ಸಿದ್ದರಾಮಯ್ಯನವರ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ಜೆ.ದೇವರಾಜು ಅವರನ್ನು ಲೋಕಾಯುಕ್ತ ವಿಚಾರಣೆಗೊಳಪಡಿಸಿದೆ. ದೀಪಾವಳಿ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಡಿಸೆಂಬರ್ 25ರೊಳಗೆ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚಿಸಿದೆ. ಜಾರಿ ನಿರ್ದೇಶನಾಲಯ (ಇಡಿ) ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ. ಮೈಸೂರಿನ ಮುಡಾ ಕಚೇರಿ ಮತ್ತು ಬೆಂಗಳೂರಿನ ಕೆಂಗೇರಿಯಲ್ಲಿರುವ ದೇವರಾಜು ನಿವಾಸದ ಮೇಲೆ ಇಡಿ ಇತ್ತೀಚೆಗೆ ದಾಳಿ ನಡೆಸಿತ್ತು. ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರ ನಿವಾಸಗಳ ಮೇಲೆ ದಾಳಿ ನಡೆಸಿ ಅವರನ್ನು ಕೂಡಾ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದಿಂದ (ಸಿಬಿಐ) ತನಿಖೆಗೆ ಒಳಪಡಿಸಬೇಕೆಂದು ಅರ್ಜಿದಾರರಾದ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಲೋಕಾಯುಕ್ತ ಅಧಿಕಾರಿಗಳನ್ನು ನೇಮಿಸಿದ್ದು, ಸಿಎಂ ವಿರುದ್ಧ ಪ್ರಾಮಾಣಿಕವಾಗಿ ತನಿಖೆ ನಡೆಸಲ್ಲ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel