ಕುಂದಾಪುರ ಬೀಚ್‌ 
ರಾಜ್ಯ

ಬೆಂಗಳೂರಿನ ಇಬ್ಬರು ಯುವಕರು ಕುಂದಾಪುರ ಬೀಚ್‌ನಲ್ಲಿ ಮುಳುಗಿ ಸಾವು

ಬೀಚ್‌ಸೈಡ್ ರೆಸಾರ್ಟ್‌ನಲ್ಲಿ ತಂಗಿದ್ದ ನಾಲ್ವರು ಸ್ನೇಹಿತರ ಪೈಕಿ ಇಬ್ಬರು ನೀರು ಪಾಲಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಕುಂದಾಪುರ: ಕುಂದಾಪುರ ಸಮೀಪದ ಬೀಜಾಡಿ ಗ್ರಾಮಕ್ಕೆ ಮದುವೆಗೆಂದು ಆಗಮಿಸಿದ್ದ ಬೆಂಗಳೂರಿನ ಇಬ್ಬರು ವ್ಯಕ್ತಿಗಳು ಶನಿವಾರ ಇಲ್ಲಿನ ಕಡಲತೀರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೀಚ್‌ಸೈಡ್ ರೆಸಾರ್ಟ್‌ನಲ್ಲಿ ತಂಗಿದ್ದ ನಾಲ್ವರು ಸ್ನೇಹಿತರ ಪೈಕಿ ಇಬ್ಬರು ನೀರು ಪಾಲಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ನಾಲ್ವರಲ್ಲಿ ಮೂವರು ನೀರಿನಲ್ಲಿ ಆಟವಾಡಲು ಹೋಗಿದ್ದರು. ಆಗ ಪ್ರಬಲವಾದ ಅಲೆಯೊಂದು ಅಪ್ಪಳಿಸಿತು. ಇದರಿಂದ ಸಂತೋಷ್ ಮತ್ತು ಅಜಯ್ ಇಬ್ಬರೂ ಸಮುದ್ರದ ಆಳಕ್ಕೆ ಹೋಗಿದ್ದಾರೆ.

ಅಪಾಯದಲ್ಲಿರುವ ತನ್ನ ಸ್ನೇಹಿತರನ್ನು ನೋಡಿದ ಮೋಕ್ಷಿತ್, ಅವರನ್ನು ರಕ್ಷಿಸಲು ಯತ್ನಿಸಿದರು. ಸಂತೋಷ್ ಅವರನ್ನು ನೀರಿನಿಂದ ಹೊರತೆಗೆಯುವಲ್ಲಿ ಮೋಕ್ಷಿತ್ ಯಶಸ್ವಿಯಾದರು. ಆದರೆ ತೀವ್ರ ಅಸ್ವಸ್ಥಗೊಂಡಿದ್ದ ಸಂತೋಷ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರೆ, ಅಜಯ್ ಅವರ ಮೃತದೇಹವನ್ನು ತುರ್ತು ಸಿಬ್ಬಂದಿ ನಂತರ ಹೊರತೆಗೆದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT