ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಹೆಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ 
ರಾಜ್ಯ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ನಿವಾಸಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಭೇಟಿ

ತಮ್ಮ ಪತ್ನಿ ಸುದೇಶ್ ಧನ್ಕರ್ ಅವರೊಂದಿಗೆ ಗೌಡರೊಂದಿಗೆ ಒಂದು ಗಂಟೆ ಕಾಲ ಕಳೆದ ಉಪರಾಷ್ಟ್ರಪತಿ, ಗೌಡರ ಪತ್ನಿ ಚೆನ್ನಮ್ಮ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಶನಿವಾರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ರಾಷ್ಟ್ರದ ಅಭಿವೃದ್ಧಿ ಮತ್ತು ರೈತರ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿದರು.

ತಮ್ಮ ಪತ್ನಿ ಸುದೇಶ್ ಧನ್ಕರ್ ಅವರೊಂದಿಗೆ ಗೌಡರೊಂದಿಗೆ ಒಂದು ಗಂಟೆ ಕಾಲ ಕಳೆದ ಉಪರಾಷ್ಟ್ರಪತಿ, ಗೌಡರ ಪತ್ನಿ ಚೆನ್ನಮ್ಮ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ''ಉಪ ರಾಷ್ಟ್ರಪತಿ ಹಾಗೂ ಮಾಜಿ ಪ್ರಧಾನಿ ಪರಸ್ಪರ ಗೌರವ ಮತ್ತು ಸೌಹಾರ್ದದ ಆಧಾರದ ಮೇಲೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮಾಜಿ ಪ್ರಧಾನಿಯ ಬಗ್ಗೆ ಉಪ ರಾಷ್ಟ್ರಪತಿಗಳು ಅಪಾರ ಗೌರವ ಹೊಂದಿದ್ದಾರೆ. ನಾನು ಅನೇಕ ಬಾರಿ ನೋಡಿದ್ದೇನೆ ಎಂದು ತಿಳಿಸಿದರು.

ಉಭಯ ನಾಯಕರು ಕೃಷಿ ಹಿನ್ನೆಲೆಯಿಂದ ಬಂದವರಾಗಿದ್ದು, ಅವರ ಹೆಚ್ಚಿನ ಮಾತುಕತೆಯು ರೈತರಿಗೆ ಸಂಬಂಧಿಸಿದ ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ. ಕೃಷಿ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು ಎಂದು ಹೇಳಿದರು.

ಈ ಹಿಂದೆ ಬೆಂಗಳೂರು ಪ್ರವಾಸದಲ್ಲಿ ದೇವೇಗೌಡರನ್ನು ಭೇಟಿಯಾಗಲು ಉಪರಾಷ್ಟ್ರಪತಿ ಬಯಸಿದ್ದರು. ಇಂದು ಅದನ್ನು ಈಡೇರಿಸಿದ್ದಾರೆ. ನಮ್ಮ ತಾಯಿ ಇನ್ನೂ ಆಸ್ಪತ್ರೆಯಲ್ಲಿದ್ದು, ಅವರ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಅವರು ತೋರಿದ ಪ್ರೀತಿ ಮತ್ತು ಗೌರವಕ್ಕಾಗಿ ನಾವು ನಿಜವಾಗಿಯೂ ಅವರಿಗೆ ಋಣಿಯಾಗಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT