ಆರೋಪಿ ಮಹಿಳೆ ನಾಗರತ್ನ. 
ರಾಜ್ಯ

ಅಕ್ರಮ ಸಂಬಂಧ: ಪ್ರಿಯಕರನ ಮೂಲಕ ಪತಿಯ ಹತ್ಯೆ, ದೂರಿನ ನಾಟಕವಾಡಿದ್ದ ಪತ್ನಿ ಸೇರಿ ಐವರ ಬಂಧನ

10 ವರ್ಷಗಳ ಹಿಂದೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಕರೂರು ಗ್ರಾಮದ ತಿಪ್ಪೇಶ್ ಹಾಗೂ ನಾಗರತ್ನ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ತನ್ನ ಪತಿಯನ್ನು ಸುಪಾರಿ ನೀಡಿ ಕೊಲೆ ಮಾಡಿಸಿ, ಬಳಿಕ ದೂರು ನೀಡಿ ನಾಟಕವಾಡಿದ್ದ ಪತ್ನಿ ಸೇರಿ ಐವರು ಆರೋಪಿಗಳನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ನಾಗರತ್ನ, ಆಕೆಯ ಪ್ರಿಯಕರ ರಾಮ್, ಶಶಿಕುಮಾರ್, ಸುರೇಶ್ ಹಾಗೂ ಚಿನ್ನ ಎಂದು ಗುರ್ತಿಸಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ತಿಪ್ಪೇಶ್ ಎಂದು ಗುರ್ತಿಸಲಾಗಿದೆ.

10 ವರ್ಷಗಳ ಹಿಂದೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಕರೂರು ಗ್ರಾಮದ ತಿಪ್ಪೇಶ್ ಹಾಗೂ ನಾಗರತ್ನ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೂಲಿ ಅರಸಿಕೊಂಡು ನಗರಕ್ಕೆ ಬಂದಿದ್ದ ತಿಪ್ಪೇಶ್ ದಂಪತಿ, ಬೆಳ್ಳಂದೂರು ಸಮೀಪ ನಿರ್ಮಾಣ ಹಂತದ ಕಟ್ಟಡಗಳಲ್ಲಿ ದುಡಿದು ಜೀವನ ಸಾಗಿಸುತ್ತಿದ್ದರು. ಬೋಗನಹಳ್ಳಿ ಲೇಬರ್ ಶೆಟ್ ನಲ್ಲಿ ವಾಸವಿದ್ದರು.

ಈ ನಡುವೆ ನಾಗರತ್ನ ತನ್ನ ಸಹೋದರಿ ಪತಿ ರಾಮನ ಜೊತೆಗೆ ನಾಗರತ್ನ ಅಕ್ರಮ ಸಂಬಂಧ ಬೆಳೆದಿತ್ತು. ಈ ವಿಚಾರ ತಿಳಿದ ತಿಪ್ಪೇಶ್, ಪತ್ನಿಯೊಂದಿಗೆ ಜಗಳವಾಡಿದ್ದ. ಈ ವಿಚಾರವನ್ನು ರಾಮನಿಗೆ ನಾಗರತ್ನ ಹೇಳಿದ್ದು, ಈ ವೇಳೆ ಇಬ್ಬರೂ ಸೇರಿ ಹತ್ಯೆಗೆ ಸಂಚು ರೂಪಿಸಿದ್ದಾರೆ. ಬಳಿಕ ಸುರೇಶ್, ಶಶಿಕುಮಾರ್ ಹಾಗೂ ಚಿನ್ನನ್ನು ಸಂಪರ್ಕಿಸಿ ಹತ್ಯೆಗೆ ಸುಪಾರಿ ನೀಡಿದ್ದಾರೆ.

ಪೂರ್ವಯೋಜಿತ ಸಂಚಿನಂತೆ ಅ.14ರಂದು ಹಣ ತರುವ ನೆಪದಲ್ಲಿ ಮನೆಯಿಂದ ಪತಿ ತಿಪ್ಪೇಶ್ ನನ್ನು ನಾಗರತ್ನ ಹೊರಗೆ ಕರೆತಂದಿದ್ದು, ಬಳಿಕ ಆರೋಪಿಗಳೊಂದಿಗೆ ಸೇರಿ ಉಸಿರುಗಟ್ಟಿಸಿ ತಿಪ್ಪೇಶ್ ನನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಬಳಿಕ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿರುವ ನಾಗರತ್ನ, ತಮ್ಮ ಪತಿಯನ್ನು ಯಾರೋ ಹತ್ಯೆ ಮಾಡಿ, ಪರಾರಿಯಾಗಿದ್ದಾರೆಂದು ದೂರು ನೀಡಿದ್ದಾಳೆ.

ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್ ಸಂಖ್ಯೆಗಳ ಕರೆಗಳ ವಿವರ ಸಂಗ್ರಹಿಸಿದ್ದಾರೆ. ಈ ವೇಳೆ ನಾಗರತ್ನ ಆರೋಪಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ವಿಚಾರ ತಿಳಿದುಬಂದಿದೆ. ಬಳಿಕ ಆಕೆಯನ್ನು ವಿಚಾರಣೆಗೊಳಪಡಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾಳೆ. ನಾಗರತ್ನ ನೀಡಿದ ಮಾಹಿತಿ ಆಧರಿಸಿ ಉಳಿದ ಆರೋಪಿಗಳನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!