ಮಂಜುಳಾ ಪಾಟೀಲ್ 
ರಾಜ್ಯ

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್‌ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!

ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು.

ಬೆಂಗಳೂರು: ಕಾಂಗ್ರೆಸ್‌ ನ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್​ ಅವರಿಗೆ ವಾಟ್ಸಪ್​ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್‌ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಆಡಿಯೋ-ವಿಡಿಯೋ ಬಹಿರಂಗಗೊಳಿಸದಿರಲು 20 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲರನ್ನು ಬಂಧಿಸಲಾಗಿದೆ. ಮಂಜುಳಾ ಪಾಟೀಲ್ ಹನಿ ಟ್ರ್ಯಾಪ್ ಖೆಡ್ಡಾಗೆ ಮಾಜಿ ಸಚಿವರಷ್ಟೇ ಅಲ್ಲ, ಇನ್ನು ಗಣ್ಯರನ್ನು ಖೆಡ್ಡಾಗೆ ಬೀಳಿಸಿರುವ ಮಾಹಿತಿ ಆಕೆಯ ಮೊಬೈಲ್​ನಲ್ಲಿ ಪತ್ತೆಯಾಗಿದೆ.

ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು. ಈ ನಡುವೆ ವಿಡಿಯೋ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಮಂಜುಳಾ, ಆ ಆಡಿಯೋ-ವಿಡಿಯೋಗಳನ್ನು ಮುಂದಿಟ್ಟು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.

ಡೀಲ್ ಕುದುರಿಸಲು ಬೆಂಗಳೂರಿಗೆ ಆಗಮಿಸಿದ್ದ ದಂಪತಿ ಮಾಲೀಕಯ್ಯ ಪುತ್ರ ರಿತೀಶ್ ಅವರನ್ನು ಭೇಟಿಯಾಗಿದ್ದರು. ಈ ವಿಚಾರವಾಗಿ ರಿತೇಶ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಂತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಕೋರ್ಟ್ ಎಂಟು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.

ಬಂಧಿತ ಮಂಜುಳಾ ಪಾಟೀಲ್ ಬ್ಯಾಗ್ ನಲ್ಲಿ 6 ಸ್ಮಾರ್ಟ್ ಪೋನ್ ಪತ್ತೆ‌ಯಾಗಿವೆ. ಈ ಆರು ಫೋನ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಪರಿಶೀಲಿಸಿದಾಗ ಬರೋಬ್ಬರಿ ಎಂಟು ಜನರ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮೊಬೈಲ್ ನಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ, ಪೊಲೀಸ್ ಅಧಿಕಾರಿ, ಪಿಡಬ್ಲೂಡಿ ಅಧಿಕಾರಿ ಸೇರಿ ಎಂಟು ಜನರ ವಿಡಿಯೋಗಳು ಪತ್ತೆಯಾಗಿದ್ದು, ಈ ಬಗ್ಗೆ ಸಿಸಿಬಿ ಪೊಲೀಸರು ಒಂದೊಂದಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT