ಮಂಜುಳಾ ಪಾಟೀಲ್ 
ರಾಜ್ಯ

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್‌ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!

ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು.

ಬೆಂಗಳೂರು: ಕಾಂಗ್ರೆಸ್‌ ನ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್​ ಅವರಿಗೆ ವಾಟ್ಸಪ್​ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್‌ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಆಡಿಯೋ-ವಿಡಿಯೋ ಬಹಿರಂಗಗೊಳಿಸದಿರಲು 20 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲರನ್ನು ಬಂಧಿಸಲಾಗಿದೆ. ಮಂಜುಳಾ ಪಾಟೀಲ್ ಹನಿ ಟ್ರ್ಯಾಪ್ ಖೆಡ್ಡಾಗೆ ಮಾಜಿ ಸಚಿವರಷ್ಟೇ ಅಲ್ಲ, ಇನ್ನು ಗಣ್ಯರನ್ನು ಖೆಡ್ಡಾಗೆ ಬೀಳಿಸಿರುವ ಮಾಹಿತಿ ಆಕೆಯ ಮೊಬೈಲ್​ನಲ್ಲಿ ಪತ್ತೆಯಾಗಿದೆ.

ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು. ಈ ನಡುವೆ ವಿಡಿಯೋ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಮಂಜುಳಾ, ಆ ಆಡಿಯೋ-ವಿಡಿಯೋಗಳನ್ನು ಮುಂದಿಟ್ಟು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.

ಡೀಲ್ ಕುದುರಿಸಲು ಬೆಂಗಳೂರಿಗೆ ಆಗಮಿಸಿದ್ದ ದಂಪತಿ ಮಾಲೀಕಯ್ಯ ಪುತ್ರ ರಿತೀಶ್ ಅವರನ್ನು ಭೇಟಿಯಾಗಿದ್ದರು. ಈ ವಿಚಾರವಾಗಿ ರಿತೇಶ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಂತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಕೋರ್ಟ್ ಎಂಟು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.

ಬಂಧಿತ ಮಂಜುಳಾ ಪಾಟೀಲ್ ಬ್ಯಾಗ್ ನಲ್ಲಿ 6 ಸ್ಮಾರ್ಟ್ ಪೋನ್ ಪತ್ತೆ‌ಯಾಗಿವೆ. ಈ ಆರು ಫೋನ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಪರಿಶೀಲಿಸಿದಾಗ ಬರೋಬ್ಬರಿ ಎಂಟು ಜನರ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮೊಬೈಲ್ ನಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ, ಪೊಲೀಸ್ ಅಧಿಕಾರಿ, ಪಿಡಬ್ಲೂಡಿ ಅಧಿಕಾರಿ ಸೇರಿ ಎಂಟು ಜನರ ವಿಡಿಯೋಗಳು ಪತ್ತೆಯಾಗಿದ್ದು, ಈ ಬಗ್ಗೆ ಸಿಸಿಬಿ ಪೊಲೀಸರು ಒಂದೊಂದಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ