ಸಿದ್ದರಾಮಯ್ಯ 
ರಾಜ್ಯ

MUDA Case: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮತ್ತೊಂದು ಸಂಕಷ್ಟ; '1.84 ಕೋಟಿ ರೂ ಹೇಗೆ ಬಂತು?'

ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ 2023ರ ನವೆಂಬರ್‌ನಲ್ಲಿ 1.84 ಕೋಟಿ ರೂ. ಹಣ ನೀಡಿ ಖರೀದಿಸಿರುವ 20 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ.

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಕೆಯಾಗಲಿದೆ ಎನ್ನಲಾಗಿದೆ.

ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ 2023ರ ನವೆಂಬರ್‌ನಲ್ಲಿ 1.84 ಕೋಟಿ ರೂ. ಹಣ ನೀಡಿ ಖರೀದಿಸಿರುವ 20 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಹಣದ ಮೂಲ ಪತ್ತೆ ಹಚ್ಚಿ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದು, ಈ ಸಂಬಂಧ ದೂರು ಕೂಡ ನೀಡಲಿದ್ದಾರೆ.

ಈ ಕುರಿತು ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಆರ್ ಟಿಐ ಕಾರ್ಯಕರ್ತ ಗಂಗರಾಜು, 'ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಓರ್ವ ಗೃಹಿಣಿಯಾಗಿದ್ದು, ಅವರಿಗೆ ಯಾವುದೇ ಬಾಹ್ಯ ಆದಾಯಗಳಿಲ್ಲ. ಆದಾಗ್ಯೂ ಅವರಿಗೆ ಇಷ್ಟು ಹಣ ಎಲ್ಲಿಂದ ಬಂತು.

ಹೀಗಾಗಿ, ಈ ಪ್ರಕರಣದ ಕುರಿತು ನಾನು ಇ.ಡಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಅಧಿಕಾರಿಗಳು ನನ್ನ ಜೊತೆ ಚರ್ಚೆಗೆ ಒಪ್ಪಿದರೆ ಮತ್ತು ಈಗ ತನಿಖೆ ನಡೆಸುತ್ತಿರುವ ಪ್ರಕರಣದ ಜೊತೆಗೆ ಇದನ್ನೂ ತೆಗೆದುಕೊಳ್ಳುತ್ತೇವೆ ಎನ್ನುವುದಾದರೆ ನಾನು ಸಂಪೂರ್ಣ ದಾಖಲಾತಿಯನ್ನು ಅವರಿಗೆ ನೀಡುತ್ತೇನೆ ಎಂದಿದ್ದಾರೆ.

ಅಂತೆಯೇ ಅಧಿಕಾರಿಗಳು ಒಂದು ವೇಳೆ ಇದು ನಮಗೆ ಸಂಬಂಧಪಟ್ಟಿದ್ದಲ್ಲ. ಬೇಕಾದರೆ ನೀವು ಪ್ರತ್ಯೇಕವಾಗಿ ದೂರು ನೀಡಿ ಎಂದರೆ ಇ.ಡಿಗೆ ದೂರು ಕೊಡುತ್ತೇನೆ ಎಂದು ಹೇಳಿದರು.

ವಿಚಾರಣೆಗೆ ಕರೆದ ಇಡಿ

ಇನ್ನು ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಶುರು ಮಾಡಿದ್ದು, ಇದರ ಭಾಗವಾಗಿ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಗಂಗರಾಜ್ ಅವರನ್ನು ಸೋಮವಾರ ವಿಚಾರಣೆಗೆ ಕರೆದಿದೆ ಎನ್ನಲಾಗಿದೆ. ವಿಚಾರಣೆ ವೇಳೆ ಗಂಗರಾಜ್ ಒಟ್ಟು 1,400 ಸೈಟ್‌ಗಳ ದಾಖಲೆಗಳನ್ನು ಇ.ಡಿಗೆ ನೀಡುತ್ತಿದ್ದಾರೆ. ಸಿದ್ದರಾಮಯ್ಯರ ಪತ್ನಿಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹುಮುಖ್ಯ ದಾಖಲೆಯನ್ನು ಇ.ಡಿಗೆ ನೀಡಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT