ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಮಗ!

ಮಗನಿಂದಲೇ ಹತ್ಯೆಯಾದ ತಂದೆಯನ್ನು ರಂಗಸ್ವಾಮಿ(50) ಎಂದು ಗುರುತಿಸಲಾಗಿದ್ದು, ಆರೋಪಿ ಪುತ್ರ ದೇವರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ: ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ‌ ತನ್ನ ತಂದೆಯನ್ನೇ ಕೊಲೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುಂದಲಗುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಮಗನಿಂದಲೇ ಹತ್ಯೆಯಾದ ತಂದೆಯನ್ನು ರಂಗಸ್ವಾಮಿ(50) ಎಂದು ಗುರುತಿಸಲಾಗಿದ್ದು, ಆರೋಪಿ ಪುತ್ರ ದೇವರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮನೆಯಲ್ಲಿ ರಾತ್ರಿ ಊಟದ ವೇಳೆ ತನಗೆ ಮೊಟ್ಟೆ ಕೊಡಲಿಲ್ಲ ಎಂದು ದೇವರಾಜ್‌ ತಂದೆ ಜತೆ ಜಗಳ ಆರಂಭಿಸಿದ್ದ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ತೀವ್ರ ಆಕ್ರೋಶಗೊಂಡ ದೇವರಾಜ್, ಎಲ್ಲಾ ವಿಚಾರದಲ್ಲೂ ನನ್ನನ್ನು ಕಡೆಗಣಿಸುತ್ತಿದ್ದೀಯಾ, ಮದುವೆಯನ್ನೂ ಮಾಡಿಸುತ್ತಿಲ್ಲ ಎಂದು ತಂದೆ ಮೇಲೆ ಹಲ್ಲೆ ನಡೆಸಿದ್ದಾನೆ.

ಆರೋಪಿ, ರಂಗಸ್ವಾಮಿಯನ್ನು ಕೆಳಗೆ ಬೀಳಿಸಿ ಎದೆ ಮತ್ತು ಕುತ್ತಿಗೆಯ ಮೇಲೆ ಕಾಲಿಟ್ಟು, ಬಲವಾಗಿ ತುಳಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಬ್ಬಿನಹೊಳೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT