ನ್ಯಾಯಮೂರ್ತಿ ಕೆಎಸ್ ಪುಟ್ಟಸ್ವಾಮಿ 
ರಾಜ್ಯ

'ಖಾಸಗಿತನ ಮೂಲಭೂತ ಹಕ್ಕು' ಐತಿಹಾಸಿಕ ತೀರ್ಪಿನ ಅರ್ಜಿದಾರ ನ್ಯಾಯಮೂರ್ತಿ ಕೆಎಸ್ ಪುಟ್ಟಸ್ವಾಮಿ ನಿಧನ

2012ರಲ್ಲಿ ಆಧಾರ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೊಟ್ಟಮೊದಲ ಬಾರಿಗೆ ರಿಟ್ ಅರ್ಜಿ ಸಲ್ಲಿಸಿದವರು ನ್ಯಾಯಮೂರ್ತಿ ಪುಟ್ಟಸ್ವಾಮಿ.

ಬೆಂಗಳೂರು: 2017ರಲ್ಲಿ ಸುಪ್ರೀಂ ಕೋರ್ಟ್‌ ಖಾಸಗಿತನ ಮೂಲಭೂತ ಹಕ್ಕು ಎಂದು ಐತಿಹಾಸಿಕ ತೀರ್ಪು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ, ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಅವರು ಸೋಮವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು.

2012ರಲ್ಲಿ ಆಧಾರ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೊಟ್ಟಮೊದಲ ಬಾರಿಗೆ ರಿಟ್ ಅರ್ಜಿ ಸಲ್ಲಿಸಿದವರು ನ್ಯಾಯಮೂರ್ತಿ ಪುಟ್ಟಸ್ವಾಮಿ.

ಆಧಾರ್ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಪುಟ್ಟಸ್ವಾಮಿ ಅವರು ಮೊದಲು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಂತರ, 26 ಅರ್ಜಿಗಳನ್ನು ಸಲ್ಲಿಸಲಾಯಿತು ಮತ್ತು ಅಂತಿಮವಾಗಿ ಸುಪ್ರೀಂ ಕೋರ್ಟ್ ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಎಂದು ತೀರ್ಪು ನೀಡಿತ್ತು.

ಫೆಬ್ರವರಿ 8, 1926 ರಂದು ಜನಿಸಿದ ಪುಟ್ಟಸ್ವಾಮಿ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಓದಿದ್ದಾರೆ ಮತ್ತು ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.

ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು 1952ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದು, 1977ರಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

1986 ರಲ್ಲಿ ನಿವೃತ್ತರಾದ ನಂತರ, ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ ಬೆಂಗಳೂರು ಪೀಠದ ಉಪಾಧ್ಯಕ್ಷರಾಗಿ, ಆಂಧ್ರಪ್ರದೇಶದ ಆಡಳಿತಾತ್ಮಕ ನ್ಯಾಯಮಂಡಳಿಯ ಅಧ್ಯಕ್ಷರಾಗಿ ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT