ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ 
ರಾಜ್ಯ

ಜಾತ್ಯಾತೀತ ಎಂದು ಹೇಳುವಾಗ 'ಜಾತಿ ಗಣತಿ' ಅಗತ್ಯ ಏನಿದೆ?; ಹರಿಪ್ರಸಾದ್ 'ಪುಡಿ ರೌಡಿ' ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು

ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ.

ಮಂಗಳೂರು: ಜಾತಿ ವ್ಯವಸ್ಥೆಯನ್ನು ಅನಿಷ್ಠ ಎಂದಿರುವವರೇ ಅದನ್ನು ಪೋಷಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತ ಎಂದು ಹೇಳುವಾಗ ಜಾತಿ ಗಣತಿ ಅಗತ್ಯ ಏನಿದೆ? ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ, ಜಾತ್ಯಾತೀತ ಅಂತ ಹೇಳಿಕೊಳ್ಳುವಾಗ ಇಲ್ಲಿ ಜಾತಿ ಪಂಗಡಗಳ ಲೆಕ್ಕಾಚಾರ ಯಾಕೆ ಎಂದು ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿಕೆ ಹರಿಪ್ರಸಾದ್ ವಿರುದ್ದ ಅವರು ಪರೋಕ್ಷ ವಾಗ್ದಾಳಿ ನಡೆಸಿದರು.

ಸಮಾಜದಲ್ಲಿ ಮಾತನಾಡುವ ಹಕ್ಕು ಇರುವುದು ಕೆಲವು ರಾಜಕಾರಣಿಗಳಿಗೆ ಮಾತ್ರವೇ? ಪ್ರಜೆಗಳಿಗೂ ಹಕ್ಕಿಲ್ಲವೇ, ರಾಜಕಾರಣಿಗಳಿಗೆ ಮಾತ್ರ ಹಕ್ಕಿದೆ ಅಂತ ಹೇಳಲಿ. ಪ್ರಜಾಪ್ರಭುತ್ವ ಸತ್ತು ಹೋಯ್ತು, ಈಗ ಇರೋದು ರಾಜಕಾರಣಿಗಳ ರಾಜ್ಯ ಅಂತ ಹೇಳಿ ಬಿಡಲಿ. ಹಾಗಿಲ್ಲ ಅಂತಾದ್ರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪೀಠಾಧಿಪತಿ ಮಾತ್ರ ಅಲ್ಲ, ಸಾಮಾನ್ಯ ಪ್ರಜೆಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿರಲೇಬೇಕು. ಹಾಗಾಗಿ ನಾವು ಅದನ್ನ ಮಾತ್ರ ಮಾಡಿದ್ದೇವೆಯೇ ಹೊರತು ಬೇರೆ ಮಾಡಿಲ್ಲ ಎಂದು ಹೇಳಿದರು. ಇಂಥಹ ರಾಜಕಾರಣಿಗಳಿಗೆ ಸದ್ಭುದ್ದಿ ಕೊಡಲಿ ಎಂದು ದೇವರಲ್ಲಿ ಕೇಳುತ್ತಿದ್ದೇನೆ. ನಮ್ಮ ಪಂಗಡದೊಳಗೆ ಯಾರಿಗೆಲ್ಲಾ ವೈಮನಸ್ಸು ಇದೆಯೋ ಅದು ದೂರವಾಗಲಿ ಎಂದು ಅವರು ಪ್ರಾರ್ಥಿಸಿದರು. ಜಾತಿ ಗಣತಿ ವಿಚಾರಕ್ಕೆ ಸಂಬಂಧ ಪೇಜಾವರ ಶ್ರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಹರಿಪ್ರಸಾದ್‌, ಪೇಜಾವರ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ