ಬೆಂಗಳೂರಿನ ಪಟಾಕಿ ಮಳಿಗೆಯೊಂದರಲ್ಲಿ ಪಟಾಕಿಗಳನ್ನು ಆಯ್ದುಕೊಳ್ಳುತ್ತಿರುವ ಬಾಲಕಿ  
ರಾಜ್ಯ

ಅತ್ತಿಬೆಲೆ ಪಟಾಕಿ ದುರಂತಕ್ಕೆ ಒಂದು ವರ್ಷ: ಅಂಗಡಿ ಮಾಲೀಕರಿಗೆ ಅಗ್ನಿಶಾಮಕ ಇಲಾಖೆಯಿಂದ ತರಬೇತಿ, ನೀರಸ ಪ್ರತಿಕ್ರಿಯೆ

ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಅವರು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಇಲಾಖೆಯ ಮೂರು ದಿನಗಳ ತರಬೇತಿ ಕಾರ್ಯಕ್ರಮ ನಡೆಸಿತ್ತು, ಆದರೆ ಅದಕ್ಕೆ ನೀರಸ ಪ್ರತಿಕ್ರಿಯೆ ಸಿಕ್ಕಿದೆ.

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಪ್ರತಿವರ್ಷ ಎಷ್ಟೇ ಸುರಕ್ಷತಾ ಕ್ರಮಗಳು, ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರೂ ಪಟಾಕಿ ಅವಘಡಗಳು ನಡೆಯುತ್ತಿರುತ್ತವೆ. ಕಳೆದ ವರ್ಷ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಸ್ಫೋಟದಲ್ಲಿ 17 ಜನರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಜಾಗರೂಕತೆಯನ್ನು ಹೆಚ್ಚಿಸಿದ್ದು, ಪಟಾಕಿ ಅಂಗಡಿಗಳಿಗೆ ಕಟ್ಟುನಿಟ್ಟಾದ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸುತ್ತಿದೆ,

ಆದಾಗ್ಯೂ, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಅವರು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಇಲಾಖೆಯ ಮೂರು ದಿನಗಳ ತರಬೇತಿ ಕಾರ್ಯಕ್ರಮ ನಡೆಸಿತ್ತು, ಆದರೆ ಅದಕ್ಕೆ ನೀರಸ ಪ್ರತಿಕ್ರಿಯೆ ಸಿಕ್ಕಿದೆ.

ಪಟಾಕಿ ಮಳಿಗೆಗಳು ಅಗತ್ಯ ಸುರಕ್ಷತಾ ಸಾಧನಗಳನ್ನು ಹೊಂದಿರಬೇಕು ಎಂದು ಹಿರಿಯ ಇಲಾಖೆಯ ಅಧಿಕಾರಿಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಪ್ರತಿನಿಧಿ ಜೊತೆ ಮಾತನಾಡುತ್ತಾ ಹೇಳುತ್ತಾರೆ. ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ಸ್ಥಾಪಿಸುವಾಗ ಅಳವಡಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಇಲಾಖೆ ಸುತ್ತೋಲೆ ಹೊರಡಿಸಿದೆ. ಸ್ಟಾಲ್‌ಗಳು ಕನಿಷ್ಠ 10x10-ಚದರ ಅಡಿ ಜಾಗವನ್ನು ಹೊಂದಿರಬೇಕು. ದಹಿಸಲಾಗದ ವಸ್ತುಗಳಿಂದ ಮಾತ್ರ ಮಳಿಗೆಗಳನ್ನು ನಿರ್ಮಿಸಬೇಕು. ಎರಡು ಬಾಗಿಲುಗಳು ಇರಬೇಕು, ಒಂದು ಮುಂಭಾಗದಲ್ಲಿ ಮತ್ತು ಇನ್ನೊಂದು ಹಿಂಭಾಗದಲ್ಲಿ. ಪ್ರತಿ ಅಂಗಡಿಯು ಮತ್ತೊಂದು ಅಂಗಡಿಯಿಂದ ಐದು ಮೀಟರ್ ಅಂತರವನ್ನು ಕಾಯ್ದುಕೊಳ್ಳಬೇಕು.

ಅಂಗಡಿ ಮಾಲೀಕರು ಕಡ್ಡಾಯವಾಗಿ ಅಗ್ನಿ ಶಾಮಕ, ಮರಳು, ಬಕೆಟ್, ಪ್ರಥಮ ಚಿಕಿತ್ಸಾ ಕಿಟ್ ಮತ್ತು 200 ಲೀಟರ್ ನೀರನ್ನು ಡ್ರಮ್‌ಗಳಲ್ಲಿ ಇಟ್ಟುಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ‘ನೋ ಸ್ಮೋಕಿಂಗ್’ ಬೋರ್ಡ್‌ಗಳೂ ಇರಬೇಕು. ಅಗ್ನಿಶಾಮಕ ಇಲಾಖೆ ಮತ್ತು ನ್ಯಾಯವ್ಯಾಪ್ತಿಯ ಪೊಲೀಸರ ತುರ್ತು ಸಂಪರ್ಕ ಸಂಖ್ಯೆಗಳನ್ನು ಸಹ ಹೊಂದಿರಬೇಕು.

ಚಿಲ್ಲರೆ ಅಂಗಡಿ ಮಾಲೀಕರಿಗೆ ತಮ್ಮ ಔಟ್‌ಲೆಟ್ ಜಾಗದಲ್ಲಿ ಅಡುಗೆ ಮತ್ತು ಎಲೆಕ್ಟ್ರಿಕ್ ಸ್ಟೌವ್‌ಗಳಿಗೆ ಬಳಸದಂತೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂಗಡಿಗಳು ಗ್ಯಾಸ್ ಸಿಲಿಂಡರ್‌ಗಳು, ತ್ಯಾಜ್ಯ ವಸ್ತುಗಳು ಅಥವಾ ಪ್ಯಾಕೇಜಿಂಗ್ ವಸ್ತುಗಳನ್ನು ಸಂಗ್ರಹಿಸಬಾರದು. ಐಎಸ್‌ಐ ಗುರುತು ಹೊಂದಿರುವ ವಿದ್ಯುತ್ ತಂತಿಗಳನ್ನು ಮಾತ್ರ ಬಳಸಬೇಕು, ಸ್ಮೋಕ್ ಅಥವಾ ಹೀಟ್ ಡಿಟೆಕ್ಟರ್ ಮತ್ತು ಫೈರ್ ಅಲಾರ್ಮ್‌ಗಳನ್ನು ಅಳವಡಿಸಲು ಚಿಲ್ಲರೆ ಅಂಗಡಿ ಮಾಲೀಕರಿಗೆ ಇಲಾಖೆ ಸಲಹೆ ನೀಡಿದೆ.

ಪಟಾಕಿ ಸ್ಟಾಲ್ ಮಾಲೀಕರು ಮೂರು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಒಳಗಾಗಬೇಕು ಎಂದು ಇನ್ನೊಬ್ಬ ಅಧಿಕಾರಿ ಹೇಳಿದರು. ಪಟಾಕಿಗಳ ಸ್ಫೋಟ ಸಾಮರ್ಥ್ಯ ಮತ್ತು ಅಪಾಯಗಳನ್ನು ಕಡಿಮೆ ಮಾಡಲು ತಡೆಗಟ್ಟುವ ಕ್ರಮಗಳಂತಹ ವಿಷಯಗಳನ್ನು ಒಳಗೊಂಡಿದೆ. ಸ್ಟಾಲ್ ಮಾಲೀಕರು ಮತ್ತು ಕಾರ್ಮಿಕರು ಸೂಕ್ತ ತರಬೇತಿ ಪಡೆದರೆ ಸಣ್ಣಪುಟ್ಟ ಅಪಘಾತಗಳನ್ನು ತಪ್ಪಿಸಬಹುದು, ಆದರೆ, ಯಾವುದೇ ಅಂಗಡಿ ಮಾಲೀಕರು ಕಾರ್ಯಕ್ರಮಕ್ಕೆ ಬಂದಿಲ್ಲ ಎಂದರು.

ಸ್ಟಾಲ್‌ಗಳನ್ನು ಸ್ಥಾಪಿಸುವ ಮೊದಲು, ಅಗ್ನಿಶಾಮಕ ಇಲಾಖೆಯು ಅಗ್ನಿಶಾಮಕ ಟೆಂಡರ್‌ಗಳ ಅಡೆತಡೆಯಿಲ್ಲದೆ ಕನಿಷ್ಠ ಆರು ಮೀಟರ್ ಜಾಗದೊಂದಿಗೆ ಸಾಕಷ್ಟು ತೆರೆದ ಸ್ಥಳವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮತ್ತು ಸ್ಟಾಲ್‌ಗಳು ವಸತಿ ಪ್ರದೇಶಗಳು ಮತ್ತು ಶಾಲಾ ಆವರಣಗಳಿಂದ ದೂರವಿದೆಯೇ ಎಂದು ಪರಿಶೀಲಿಸುತ್ತದೆ.

ಅಗ್ನಿಶಾಮಕ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಅಂಗಡಿಗಳ ಬಳಿ ಅಗ್ನಿಶಾಮಕ ಟೆಂಡರ್‌ಗಳನ್ನು ನಿಯೋಜಿಸುತ್ತದೆ. ಸುರಕ್ಷತಾ ಶಿಷ್ಟಾಚಾರಗಳನ್ನು ಅನುಸರಿಸಲು ವಿಫಲವಾದರೆ ಪರವಾನಗಿಗಳ ರದ್ದತಿ ಮತ್ತು ಸಂಭಾವ್ಯ ಕಾನೂನು ಕ್ರಮಕ್ಕೆ ಕಾರಣವಾಗಬಹುದು ಎನ್ನುತ್ತಾರೆ ಅಧಿಕಾರಿಗಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT