ಸಿದ್ದರಾಮಯ್ಯ ANI
ರಾಜ್ಯ

ಒಳಮೀಸಲಾತಿ: ಶೀಘ್ರದಲ್ಲೇ ಏಕಸದಸ್ಯ ಆಯೋಗ ರಚನೆ, 3 ತಿಂಗಳಲ್ಲೇ ಜಾರಿಗೆ ಕ್ರಮ

ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ಕೈಗೊಂಡಿದ್ದೇವೆ.

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ(ಎಸ್‌ಸಿ) ಒಳಮೀಸಲಾತಿ ಒದಗಿಸಲು ಪ್ರಾಯೋಗಿಕ ದತ್ತಾಂಶಗಳನ್ನು ಸಂಗ್ರಹಿಸಲು ಶೀಘ್ರದಲ್ಲೇ ಏಕಸದಸ್ಯ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದರು.

"ಯಾವುದೇ ಪ್ರಾಯೋಗಿಕ ಡೇಟಾ ಇಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಎಸ್‌ಸಿಗಳ ಒಂದು ವಿಭಾಗ, ವಿಶೇಷವಾಗಿ 'ಎಸ್‌ಸಿ ಎಡ'ಕ್ಕೆ ಸೇರಿದ ಅನೇಕ ಸಮುದಾಯಗಳು ಇನ್ನೂ ಅಂಚಿನಲ್ಲಿರುವಾಗ ಕೆಲವು ಪ್ರಭಾವಿ ಉಪ-ಜಾತಿಗಳು ಮಾತ್ರ ಬಹುಪಾಲು ಪ್ರಯೋಜನಗಳನ್ನು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿ ಆಂತರಿಕ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ ಎಂದರು.

ಈ ವಿಚಾರವನ್ನು ನಿನ್ನೆಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಆದಾಗ್ಯೂ, ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ. ಹೊಸ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸೀಮಿತವಾಗಿ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ಕಾರವು ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT