ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಯುವತಿಯರು Swimming ಮಾಡುವ ವಿಡಿಯೋ ಚಿತ್ರೀಕರಿಸಿ ಹಲ್ಲೆ; ಮೂವರ ಬಂಧನ!

ಆರೋಪಿಗಳು ತೋಟದ ಮನೆಯೊಳಗೆ ನುಗ್ಗಿ ಈಜುತ್ತಿದ್ದ ಇಬ್ಬರು ಹುಡುಗಿಯರನ್ನು ಚಿತ್ರೀಕರಿಸಲು ಫೋಟೋ ತೆಗೆದುಕೊಳ್ಳಲು ಪ್ರಯತ್ನಿಸಿದರು. ಅವರನ್ನು ತಡೆಯಲು ಯತ್ನಿಸಿದ ಇತರರ ಮೇಲೆ ಮರದ ದಿಮ್ಮಿಗಳಿಂದ ಹಲ್ಲೆ ನಡೆಸಲಾಯಿತು.

ಬೆಂಗಳೂರು: ವೀಕೆಂಡ್ ಕಳೆಯಲು ರಾಮನಗರ ಬಳಿಯ ನಗರದ ಹೊರವಲಯದಲ್ಲಿರುವ ಫಾರ್ಮ್‌ಹೌಸ್‌ಗೆ ತೆರಳಿದ್ದ ಬಸವೇಶ್ವರನಗರದ ಏಳು ಮಂದಿ ಪದವಿ ವಿದ್ಯಾರ್ಥಿಗಳ ಗುಂಪಿನ ಮೇಲೆ ಮೂವರು ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ರಾಮನಗರ ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ ಚಿಕ್ಕನಹಳ್ಳಿಯ ಎಪಿಎಸ್ ಲೇಔಟ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಶನಿವಾರ ರಾತ್ರಿ 10.30 ರ ಸುಮಾರಿಗೆ ಘಟನೆ ನಡೆದಿದೆ.

ಆರೋಪಿಗಳು ತೋಟದ ಮನೆಯೊಳಗೆ ನುಗ್ಗಿ ಈಜುತ್ತಿದ್ದ ಇಬ್ಬರು ಹುಡುಗಿಯರನ್ನು ಚಿತ್ರೀಕರಿಸಲು ಫೋಟೋ ತೆಗೆದುಕೊಳ್ಳಲು ಪ್ರಯತ್ನಿಸಿದರು. ಅವರನ್ನು ತಡೆಯಲು ಯತ್ನಿಸಿದ ಇತರರ ಮೇಲೆ ಮರದ ದಿಮ್ಮಿಗಳಿಂದ ಹಲ್ಲೆ ನಡೆಸಲಾಯಿತು. ನಂತರ ವಿದ್ಯಾರ್ಥಿಗಳು ಆರೋಪಿಗಳನ್ನು ಸದೆಬಡಿಯುವಲ್ಲಿ ಯಶಸ್ವಿಯಾದರು, ಅವರನ್ನು ತೋಟದ ಮನೆಯಿಂದ ಹೊರಗೆ ತಳ್ಳಿ ಬಾಗಿಲು ಹಾಕಿ, ನಂತರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ.

ಬಿಕಾಂ ಓದುತ್ತಿರುವ ಏಳು ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ದೀಪಾವಳಿ ಹಬ್ಬಕ್ಕೆ ರಜೆ ನೀಡಿದ್ದರಿದ ಹೊರಗೆ ಹೋಗಲು ನಿರ್ಧರಿಸಿದರು. ವಿದ್ಯಾರ್ಥಿಯೊಬ್ಬನಿಗೆ ಮಾಲೀಕನ ಪರಿಚಯವಿದ್ದ ಕಾರಣ ಅವರು ತೋಟದ ಮನೆಗೆ ಹೋಗಿದ್ದರು. ಇಬ್ಬರು ಹುಡುಗಿಯರು ಅಲ್ಲಿ ಸ್ವಿಮ್ಮಿಂಗ್ ಮಾಡುತ್ತಿದ್ದರು. ಇತರರು ಅಂತಕ್ಷರಿ ಆಡುತ್ತಿದ್ದರು. ಹೊರಗಿನಿಂದ ಯಾರೋ ಬಾಗಿಲು ಬಡಿಯುತ್ತಿದ್ದಂತೆ ಒಬ್ಬ ವಿದ್ಯಾರ್ಥಿನಿ ಎದ್ದು ಹೋಗಿ ಬಾಗಿಲು ತೆರೆದಿದ್ದಾಳೆ.

ಮೂವರು ಆರೋಪಿಗಳು ಸ್ಥಳೀಯರು ಎಂದು ಹೇಳಿಕೊಂಡು ಒಳಗೆ ನುಗ್ಗಿ ನಮ್ಮನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಕೂಗಾಡಲು ಪ್ರಾರಂಭಿಸಿದರು. ಇಲ್ಲಿಗೆ ಬರಲು ನಿಮಗೆ ಅನುಮತಿ ನೀಡಿದವರು ಯಾರು ಎಂದು ಕೇಳಿ ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು. ನಂತರ ಆರೋಪಿಗಳು ಹುಡುಗಿಯರ ಫೋಟೋ ತೆಗೆಯಲು ಪ್ರಾರಂಭಿಸಿದರು. ಇತರ ವಿದ್ಯಾರ್ಥಿಗಳು ಅವರನ್ನು ತಡೆಯಲು ಪ್ರಯತ್ನಿಸಿದಾಗ, ಆರೋಪಿಗಳು ಮರದ ದಿಮ್ಮಿಗಳಿಂದ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು 22 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬರು ನೀಡಿದ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸರು ಆಗಮಿಸಿದ ನಂತರ ಗಂಭೀರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಕೆಂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂತ್ರಸ್ತ ಇಬ್ಬರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ನನ್ನ ಸ್ನೇಹಿತ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದಾನೆ, ಅವನ ಸ್ಥಿತಿ ಅತ್ಯಂತ ಗಂಭೀರವಾಗಿದೆ, ಅವನಿಗೆ ಏನಾಗುತ್ತದೆ ಎಂದು ನಮಗೆ ತಿಳಿದಿಲ್ಲ" ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ. ಚಂದ್ರು, ನಾಗೇಶ್ ಮತ್ತು ಮುರಳಿ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೂವರೂ ನಿರುದ್ಯೋಗಿಗಳು. ಅವರು ಮದ್ಯದ ಅಮಲಿನಲ್ಲಿದ್ದ ಶಂಕೆ ಇದೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 109 ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT