ಹಂಪಿ (ಸಂಗ್ರಹ ಚಿತ್ರ) 
ರಾಜ್ಯ

Hampi ಸ್ಮಾರಕದ ಬಳಿ ಕಸ ಸುಡುತ್ತಿದ್ದ ASI ಸಿಬ್ಬಂದಿ, ಪ್ರಕರಣ ದಾಖಲು!

UNESCO ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯಲ್ಲಿರುವ ASI ರಕ್ಷಿತ ಸ್ಮಾರಕವಾದ ಗೆಜ್ಜಲ್ ಮಂಟಪದ ಬಳಿ ಕಸವನ್ನು ಸುಡುವ ಮೂಲಕ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ಸಿಬ್ಬಂದಿ ತಮ್ಮದೇ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ.

ಹೊಸಪೇಟೆ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಕಸ ಸುಡುತ್ತಿದ್ದ ಪುರಾತತ್ವ ಇಲಾಖೆ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹೌದು.. UNESCO ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯಲ್ಲಿರುವ ASI ರಕ್ಷಿತ ಸ್ಮಾರಕವಾದ ಗೆಜ್ಜಲ್ ಮಂಟಪದ ಬಳಿ ಕಸವನ್ನು ಸುಡುವ ಮೂಲಕ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ಸಿಬ್ಬಂದಿ ತಮ್ಮದೇ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ.

ನಿಯಮಗಳ ಪ್ರಕಾರ, ಸಂರಕ್ಷಿತ ಸ್ಮಾರಕಗಳ ಬಳಿ ಬೆಂಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಅವರ ವಿರುದ್ಧ ಇದೀಗ ಇಲಾಖೆ ಪ್ರಕರಣ ದಾಖಲಿಸಿದೆ.

ಇನ್ನು ಇದು ಎರಡು ದಿನಗಳ ಹಿಂದೆ ಘಟನೆ ಎಂದು ತಿಳಿದುಬಂದಿದ್ದು, ಸಿಬ್ಬಂದಿ ಬೆಂಕಿ ಹಚ್ಚುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಯೊಬ್ಬರು, "ಇದು ಆಘಾತಕಾರಿಯಾಗಿದೆ. ಎಎಸ್ಐ ನಿಯಮಗಳ ಪ್ರಕಾರ ಸಂರಕ್ಷಿತ ಪ್ರದೇಶಗಳಲ್ಲಿ ಬೆಂಕಿ ಹಚ್ಚುವಂತಿಲ್ಲ. ಎರಡು ದಿನಗಳ ಹಿಂದೆ ವಿಜಯ್ ವಿಟ್ಲ ದೇವಸ್ಥಾನಕ್ಕೆ ಹೋಗುವಾಗ ನಾನು ಇದನ್ನು ನೋಡಿದೆ. ಕೆಲವು ಎಎಸ್‌ಐ ಸಿಬ್ಬಂದಿ ಗೆಜ್ಜಲ್ ಮಂಟಪದ ಬಳಿ ಬೆಂಕಿ ಹಚ್ಚಿದ್ದರು ಎಂದು ಹೇಳಿದರು.

"ಬೆಂಕಿ ಮತ್ತು ಅದರ ಜ್ವಾಲೆಯು ಸ್ಮಾರಕದ ಸೌಂದರ್ಯಕ್ಕೆ ಹಾನಿಯನ್ನುಂಟುಮಾಡುತ್ತದೆ. ಸ್ಮಾರಕದ ಬಳಿ ಕಸವನ್ನು ಸುಡುವ ಅವಶ್ಯಕತೆ ಏನೆಂದು ತಿಳಿದಿಲ್ಲ, ಇದು ಮೊದಲ ಬಾರಿ ಅಲ್ಲ ಎಂದು ಅನೇಕ ಸ್ಥಳೀಯರು ಹೇಳಿದ್ದಾರೆ. ಆದರೆ ಪದೇ ಪದೇ ಇಂತಹ ಘಟನೆಗಳು ಮರುಕಳುಸುತ್ತಲೇ ಇದೆ.

ಹೀಗಾಗಿ ಹಂಪಿಯಲ್ಲಿ ಪ್ರತಿನಿತ್ಯ ತಪಾಸಣೆ ನಡೆಸುವಂತೆ ನಾನು ಅಧಿಕಾರಿಗಳಲ್ಲಿ ವಿನಂತಿಸುತ್ತೇನೆ. ಮುಂದಿನ ಪೀಳಿಗೆಗಾಗಿ ನಾವು ಈ ಸ್ಮಾರಕಗಳಿಗೆ ರಕ್ಷಣೆ ನೀಡಬೇಕು. ನಿಯಮಗಳನ್ನು ಉಲ್ಲಂಘಿಸಿ ಬೆಂಕಿ ಹಚ್ಚಿದ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಂದಹಾಗೆ ಗೆಜ್ಜಲ್ ಮಂಟಪವು ಐತಿಹಾಸಿಕ ವಿಜಯ ವಿಠಲ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿದೆ. ಹಂಪಿಯ ಸ್ಮಾರಕಗಳಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT