ಹಂಪಿ (ಸಂಗ್ರಹ ಚಿತ್ರ) 
ರಾಜ್ಯ

Hampi ಸ್ಮಾರಕದ ಬಳಿ ಕಸ ಸುಡುತ್ತಿದ್ದ ASI ಸಿಬ್ಬಂದಿ, ಪ್ರಕರಣ ದಾಖಲು!

UNESCO ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯಲ್ಲಿರುವ ASI ರಕ್ಷಿತ ಸ್ಮಾರಕವಾದ ಗೆಜ್ಜಲ್ ಮಂಟಪದ ಬಳಿ ಕಸವನ್ನು ಸುಡುವ ಮೂಲಕ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ಸಿಬ್ಬಂದಿ ತಮ್ಮದೇ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ.

ಹೊಸಪೇಟೆ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಕಸ ಸುಡುತ್ತಿದ್ದ ಪುರಾತತ್ವ ಇಲಾಖೆ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಹೌದು.. UNESCO ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯಲ್ಲಿರುವ ASI ರಕ್ಷಿತ ಸ್ಮಾರಕವಾದ ಗೆಜ್ಜಲ್ ಮಂಟಪದ ಬಳಿ ಕಸವನ್ನು ಸುಡುವ ಮೂಲಕ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ಸಿಬ್ಬಂದಿ ತಮ್ಮದೇ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ.

ನಿಯಮಗಳ ಪ್ರಕಾರ, ಸಂರಕ್ಷಿತ ಸ್ಮಾರಕಗಳ ಬಳಿ ಬೆಂಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಅವರ ವಿರುದ್ಧ ಇದೀಗ ಇಲಾಖೆ ಪ್ರಕರಣ ದಾಖಲಿಸಿದೆ.

ಇನ್ನು ಇದು ಎರಡು ದಿನಗಳ ಹಿಂದೆ ಘಟನೆ ಎಂದು ತಿಳಿದುಬಂದಿದ್ದು, ಸಿಬ್ಬಂದಿ ಬೆಂಕಿ ಹಚ್ಚುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಯೊಬ್ಬರು, "ಇದು ಆಘಾತಕಾರಿಯಾಗಿದೆ. ಎಎಸ್ಐ ನಿಯಮಗಳ ಪ್ರಕಾರ ಸಂರಕ್ಷಿತ ಪ್ರದೇಶಗಳಲ್ಲಿ ಬೆಂಕಿ ಹಚ್ಚುವಂತಿಲ್ಲ. ಎರಡು ದಿನಗಳ ಹಿಂದೆ ವಿಜಯ್ ವಿಟ್ಲ ದೇವಸ್ಥಾನಕ್ಕೆ ಹೋಗುವಾಗ ನಾನು ಇದನ್ನು ನೋಡಿದೆ. ಕೆಲವು ಎಎಸ್‌ಐ ಸಿಬ್ಬಂದಿ ಗೆಜ್ಜಲ್ ಮಂಟಪದ ಬಳಿ ಬೆಂಕಿ ಹಚ್ಚಿದ್ದರು ಎಂದು ಹೇಳಿದರು.

"ಬೆಂಕಿ ಮತ್ತು ಅದರ ಜ್ವಾಲೆಯು ಸ್ಮಾರಕದ ಸೌಂದರ್ಯಕ್ಕೆ ಹಾನಿಯನ್ನುಂಟುಮಾಡುತ್ತದೆ. ಸ್ಮಾರಕದ ಬಳಿ ಕಸವನ್ನು ಸುಡುವ ಅವಶ್ಯಕತೆ ಏನೆಂದು ತಿಳಿದಿಲ್ಲ, ಇದು ಮೊದಲ ಬಾರಿ ಅಲ್ಲ ಎಂದು ಅನೇಕ ಸ್ಥಳೀಯರು ಹೇಳಿದ್ದಾರೆ. ಆದರೆ ಪದೇ ಪದೇ ಇಂತಹ ಘಟನೆಗಳು ಮರುಕಳುಸುತ್ತಲೇ ಇದೆ.

ಹೀಗಾಗಿ ಹಂಪಿಯಲ್ಲಿ ಪ್ರತಿನಿತ್ಯ ತಪಾಸಣೆ ನಡೆಸುವಂತೆ ನಾನು ಅಧಿಕಾರಿಗಳಲ್ಲಿ ವಿನಂತಿಸುತ್ತೇನೆ. ಮುಂದಿನ ಪೀಳಿಗೆಗಾಗಿ ನಾವು ಈ ಸ್ಮಾರಕಗಳಿಗೆ ರಕ್ಷಣೆ ನೀಡಬೇಕು. ನಿಯಮಗಳನ್ನು ಉಲ್ಲಂಘಿಸಿ ಬೆಂಕಿ ಹಚ್ಚಿದ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಂದಹಾಗೆ ಗೆಜ್ಜಲ್ ಮಂಟಪವು ಐತಿಹಾಸಿಕ ವಿಜಯ ವಿಠಲ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿದೆ. ಹಂಪಿಯ ಸ್ಮಾರಕಗಳಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT