ಡಿ ಕೆ ಶಿವಕುಮಾರ್ 
ರಾಜ್ಯ

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಹೈ ಕೋರ್ಟ್ ತೀರ್ಪು ಸ್ವಾಗತಾರ್ಹ- ಡಿಕೆ ಶಿವಕುಮಾರ್

ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪನ್ನು ಸರ್ಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ಆರು ವಾರಗಳ ಅವಧಿಗೆ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

47 ವರ್ಷದ ದರ್ಶನ್ ಅವರನ್ನು ಜೂನ್ 11 ರಂದು ಬಂಧಿಸಲಾಗಿದ್ದು, ಬಳ್ಳಾರಿ ಜೈಲಿನಲ್ಲಿ ಇರಿಸಲಾಗಿದೆ. ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಸಹ ಆರೋಪಿಗಳಾಗಿದ್ದಾರೆ. ಪವಿತ್ರಾ ಗೌಡ ಬೆಂಗಳೂರಿನ ಜೈಲಿನಲ್ಲಿ ಮತ್ತು ಇತರರು ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ, ಅವರಲ್ಲಿ ಕೆಲವರು ಇತ್ತೀಚೆಗೆ ಜಾಮೀನು ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT