ಡಿ ಕೆ ಶಿವಕುಮಾರ್ 
ರಾಜ್ಯ

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಹೈ ಕೋರ್ಟ್ ತೀರ್ಪು ಸ್ವಾಗತಾರ್ಹ- ಡಿಕೆ ಶಿವಕುಮಾರ್

ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪನ್ನು ಸರ್ಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ಆರು ವಾರಗಳ ಅವಧಿಗೆ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

47 ವರ್ಷದ ದರ್ಶನ್ ಅವರನ್ನು ಜೂನ್ 11 ರಂದು ಬಂಧಿಸಲಾಗಿದ್ದು, ಬಳ್ಳಾರಿ ಜೈಲಿನಲ್ಲಿ ಇರಿಸಲಾಗಿದೆ. ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿ 15 ಮಂದಿ ಸಹ ಆರೋಪಿಗಳಾಗಿದ್ದಾರೆ. ಪವಿತ್ರಾ ಗೌಡ ಬೆಂಗಳೂರಿನ ಜೈಲಿನಲ್ಲಿ ಮತ್ತು ಇತರರು ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ, ಅವರಲ್ಲಿ ಕೆಲವರು ಇತ್ತೀಚೆಗೆ ಜಾಮೀನು ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ಭಾರೀ ಬೆಂಕಿ, ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ'ಶಾಸಕರು, ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿ.ಕೆ ಶಿವಕುಮಾರ್

SCROLL FOR NEXT