ಪ್ರಹ್ಲಾದ್ ಜೋಷಿ 
ರಾಜ್ಯ

ದೇಶದಲ್ಲಿರುವ ವಕ್ಫ್‌ ಕಾನೂನು ತೆಗೆದುಹಾಕುವುದು ಸೂಕ್ತ: ಪ್ರಹ್ಲಾದ್ ಜೋಶಿ

ದೇಶದ ಯಾವ ವಿಭಾಗಗಳಿಗೂ ಇರದ ಅಧಿಕಾರವನ್ನು 2013ರಲ್ಲಿ ವಕ್ಫ್‌ ಮಂಡಳಿಗೆ ನೀಡಲಾಗಿದೆ. ಮಂಡಳಿಯ ಅಧಿಸೂಚನೆಯನ್ನು ವಿಚಾರಣೆ ನಡೆಸುವ ಅಧಿಕಾರ ಸುಪ್ರೀಂ ಕೋರ್ಟ್‌ಗೂ ಇಲ್ಲ ಎಂದು ಮಂಡಳಿಯವರು ಹೇಳಿದ್ದಾರೆ ಎಂದು ತಿಳಿಸಿದರು.

ಹುಬ್ಬಳ್ಳಿ: ಭಾರತದಲ್ಲಿ ವಕ್ಫ್ ಕಾನೂನು ತಪ್ಪಾಗಿದೆ. ಇದನ್ನು ಸಂಪೂರ್ಣವಾಗಿ ತೆಗೆದುಹಾಕುವುದು ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ನೆಹರೂ ಕಾಲದಲ್ಲಿ ಕಾಂಗ್ರೆಸ್ ಏಕೆ ವಕ್ಫ್ ಕಾನೂನನ್ನು ಜಾರಿಗೊಳಿಸಿತು . ದೇಶದ ಯಾವ ವಿಭಾಗಗಳಿಗೂ ಇರದ ಅಧಿಕಾರವನ್ನು 2013ರಲ್ಲಿ ವಕ್ಫ್‌ ಮಂಡಳಿಗೆ ನೀಡಲಾಗಿದೆ. ಮಂಡಳಿಯ ಅಧಿಸೂಚನೆಯನ್ನು ವಿಚಾರಣೆ ನಡೆಸುವ ಅಧಿಕಾರ ಸುಪ್ರೀಂ ಕೋರ್ಟ್‌ಗೂ ಇಲ್ಲ ಎಂದು ಮಂಡಳಿಯವರು ಹೇಳಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್‌ ಮುಸ್ಲಿಂ ತುಷ್ಟೀಕರಣದಲ್ಲಿ ತೊಡಗಿದೆ. ವಕ್ಫ್‌ ಆಸ್ತಿ ನೋಟಿಸ್‌ ಹಿಂದೆ ಕಾಂಗ್ರೆಸ್‌ ಸರ್ಕಾರ ಮತ್ತು ಸಚಿವ ಜಮೀರ್‌ ಅಹಮದ್‌ ಖಾನ್‌ ಕುಮ್ಮಕ್ಕು ಇದೆ. ವಕ್ಫ್‌ ಆಸ್ತಿ ಎಂದು ರೈತರಿಗೆ ನೋಟಿಸ್‌ ನೀಡಿದ ತಹಶೀಲ್ದಾರ್ ಅಮಾನತಿಗೆ ವಿಜಯಪುರ ಜಿಲ್ಲಾಧಿಕಾರಿ ಕ್ರಮ ವಹಿಸಬೇಕು. ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.

ಭವಿಷ್ಯದಲ್ಲಿ ವಕ್ಫ್ ಬೋರ್ಡ್ ನಮ್ಮ ಮನೆಗಳು ಮತ್ತು ಜಮೀನಿನ ಮಾಲೀಕತ್ವವನ್ನು ಪಡೆದರೆ ಆಶ್ಚರ್ಯವಿಲ್ಲ. ವಕ್ಫ್ ಬೋರ್ಡ್‌ಗಳಿಗೆ ಅನಿಯಮಿತ ಅಧಿಕಾರ ನೀಡುವ ಮೂಲಕ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಇದು ಯಾವುದೇ ರೂಪದಲ್ಲಿ ಸ್ವೀಕಾರಾರ್ಹವಲ್ಲ. ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಕಾಂಗ್ರೆಸ್ ರೈತರ ಆಸ್ತಿಗಳು, ದೇವಸ್ಥಾನಗಳು, ಮಠಗಳು ಮತ್ತು ಬಡ ಮುಸ್ಲಿಮರ ಭೂಮಿಯನ್ನು ವಕ್ಫ್ ಮಂಡಳಿ ವಶಪಡಿಸಿಕೊಳ್ಳಲು ಬೆಂಬಲಿಸಿದೆ ಎಂದು ಅವರು ಹೇಳಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಭೂ ದಾಖಲೆಗಳನ್ನು ತಿದ್ದುಪಡಿ ಮಾಡಿ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಘೋಷಿಸಿರುವ ತಹಶೀಲ್ದಾರ್ ಹಾಗೂ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT