ಸಾಂದರ್ಭಿಕ ಚಿತ್ರ 
ರಾಜ್ಯ

ಹೆಚ್ಚಿನ ಆದಾಯ ಸಂಗ್ರಹದ ಗುರಿ; ಒತ್ತಡದಲ್ಲಿ ಅಬಕಾರಿ ಇಲಾಖೆ!

ರಾಜ್ಯದ ಬೊಕ್ಕಸಕ್ಕೆ ಶೇ.20ರಷ್ಟು ಆದಾಯ ನೀಡುವ ಅಬಕಾರಿ ಇಲಾಖೆ ಪ್ರಸಕ್ತ 2024-25ನೇ ಹಣಕಾಸು ವರ್ಷದಲ್ಲಿ 38,525 ಕೋಟಿ ರೂ.ಗಳ ಆದಾಯ ಸಂಗ್ರಹದ ಗುರಿ ಹೊಂದಿದೆ.

ಬೆಂಗಳೂರು: ಆದಾಯ ಸಂಗ್ರಹವನ್ನು ತ್ವರಿತಗೊಳಿಸುವಂತೆ ರಾಜ್ಯ ಸರ್ಕಾರದ ಸ್ವಂತ ತೆರಿಗೆ ಮೂಲಗಳಾದ ವಾಣಿಜ್ಯ ತೆರಿಗೆ, ಅಬಕಾರಿ, ಮುದ್ರಾಂಕ ಮತ್ತು ನೋಂದಣಿ, ಸಾರಿಗೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳಿಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಒಂದು ವೇಳೆ ನಿಗದಿತ ಗುರಿ ಸಾಧಿಸದಿದ್ದಲ್ಲಿ ಅವರನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಬೊಕ್ಕಸಕ್ಕೆ ಶೇ.20ರಷ್ಟು ಆದಾಯ ನೀಡುವ ಅಬಕಾರಿ ಇಲಾಖೆ ಪ್ರಸಕ್ತ 2024-25ನೇ ಹಣಕಾಸು ವರ್ಷದಲ್ಲಿ 38,525 ಕೋಟಿ ರೂ.ಗಳ ಆದಾಯ ಸಂಗ್ರಹದ ಗುರಿ ಹೊಂದಿದೆ. ಇಲ್ಲಿಯವರೆಗೆ ಏಪ್ರಿಲ್ 1 ರಿಂದ ಅಕ್ಟೋಬರ್ 24 ರವರೆಗೆ ಇಲಾಖೆಯು 20,350 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಮತ್ತು ಮುಂದಿನ ವರ್ಷದ ಮಾರ್ಚ್ ಅಂತ್ಯದ ವೇಳೆಗೆ 38,525 ಕೋಟಿ ರೂ.ಗಳ ಸಂಗ್ರಹದ ಗುರಿಯನ್ನು ನಿಗದಿಪಡಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ ಶೇ. 100 ರಷ್ಟು ಬೃಹತ್ ಆದಾಯದ ಗುರಿ ಸಾಧಿಸುವುದು ಒಂದು ಸವಾಲಾಗಿದೆ.

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಹೊರತಾಗಿ ಮಾರಾಟ ಮತ್ತು ಬಳಕೆ ಗರಿಷ್ಠವಾಗಿರುವ ಯಾವುದೇ ಪ್ರಮುಖ ಘಟನೆಗಳಿಲ್ಲ. ಈಗಾಗಲೇ ಕೊರತೆ ಎದುರಿಸುತ್ತಿದೆ ಎಂದು ಅನಾಮಧೇಯ ಮೂಲಗಳು ತಿಳಿಸಿವೆ. ಮಾರ್ಚ್ ಅಂತ್ಯದ ವೇಳೆಗೆ ಇಲಾಖೆಯು ಶೇ. 90-95 ರಷ್ಟು ಗುರಿ ಸಾಧಿಸಲು ಸಾಧ್ಯವಾಗುತ್ತದೆ. ಅದು ಕೂಡ ಹೆಚ್ಚಿನ ನಿರೀಕ್ಷೆಯಾಗಿದೆ ಎಂದು ಅವು ಹೇಳಿವೆ. ಮೂಲಗಳ ಪ್ರಕಾರ, ಸರ್ಕಾರ ಒತ್ತಡ ಹಾಕಿದ ನಂತರ ಸೆಪ್ಟೆಂಬರ್ ಮತ್ತು ಅಕ್ಟೋಬರ್ ಮಧ್ಯೆ ರೂ. 700 ಕೋಟಿ ರೂ.ಆದಾಯ ಸಂಗ್ರಹಿಸಿದೆ. ಆಗಸ್ಟ್ 23 ರಂದು ಭಾರತೀಯ ನಿರ್ಮಿತ ಮದ್ಯದ (ಐಎಂಎಲ್) 18 ಅಬಕಾರಿ ಸ್ಲ್ಯಾಬ್‌ಗಳನ್ನು ಸಹ 16 ಕ್ಕೆ ಇಳಿಸಲಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ಅಬಕಾರಿ ಇಲಾಖೆಯ ಆದಾಯದ ಗುರಿಗಳನ್ನು ಗಮನಿಸಿದರೆ, 2018 ಮತ್ತು 2021 ರ ನಡುವೆ 1,000 ಕೋಟಿ ಮತ್ತು 1,500 ಕೋಟಿಗಳ ನಡುವೆ ಕ್ರಮೇಣ ಹೆಚ್ಚಳವನ್ನು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕದ ನಂತರ ಆದಾಯದಲ್ಲಿ ಹೆಚ್ಚಳ ಕಂಡುಬಂದಿತು. 2020-'21 ರಲ್ಲಿ ಆದಾಯದ ಗುರಿಯನ್ನು ರೂ. 22,700 ಕೋಟಿಗೆ ನಿಗದಿಪಡಿಸಲಾಗಿತ್ತು. 2021-22ರಲ್ಲಿ ರೂ. 24,580 ಕೋಟಿಗೆ ಹೆಚ್ಚಿಸಲಾಯಿತು ಮತ್ತು 2022-'23 ರ ಮುಂದಿನ ಆರ್ಥಿಕ ವರ್ಷದಲ್ಲಿ ರೂ. 29,000 ಕೋಟಿ, 2023-24ರ ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಆದಾಯವನ್ನು 36,000 ಕೋಟಿ ರೂ. 2024-25ಕ್ಕೆ 38,525 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT