ಹಾಸನಾಂಬೆ ದೇವಾಲಯ 
ರಾಜ್ಯ

ಹಾಸನಾಂಬೆ ದರ್ಶನ: ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ

ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬೆ ದರ್ಶನ ವಿಚಾರದಲ್ಲಿ ಇಂದು ಗುರುವಾರ ಸಹ ಗಲಾಟೆ ಮುಂದುವರಿದಿದೆ. ದೇವಾಲಯದಲ್ಲಿ ಕುಟುಂಬಸ್ಥರನ್ನು ದೇಗುಲಕ್ಕೆ ಕರೆದೊಯ್ಯುವ ವಿಚಾರವಾಗಿ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಮಾರಾಮಾರಿ ನಡೆದಿದೆ.

ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.

ನಿನ್ನೆ ಹಾಸನಾಂಬ ದರ್ಶನ ವಿಚಾರವಾಗಿ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದರು. ಜಗಳ ಬಿಡಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದರು.

ಹಾಸನಾಂಬ ದೇವಿಯ ದರ್ಶನಕ್ಕೆ ಇನ್ನು ಕೆಲವೇ ದಿನಗಳು ಅವಕಾಶವಿದ್ದು, ಭಕ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ದೇಗುಲಕ್ಕೆ ಬರುತ್ತಿದ್ದಾರೆ. ನಿಯಂತ್ರಣ ಮಾಡಲಾಗದೆ ಸಿಬ್ಬಂದಿ ಪರದಾಡುವಂತಾಯಿತು. ಹೀಗಾಗಿ 1000 ರೂಪಾಯಿ ಮೊತ್ತ ನೇರ ದರ್ಶನದ ಟಿಕೆಟ್ ವಿತರಣೆ, ವಿಐಪಿ ಪಾಸ್ ರದ್ದುಗೊಳಿಸಲಾಗಿದೆ. ಜತೆಗೆ, ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ ವಿಶೇಷ ಬಸ್​ಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT