ಹಾಸನಾಂಬೆ ದೇವಾಲಯ 
ರಾಜ್ಯ

ಹಾಸನಾಂಬೆ ದರ್ಶನ: ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ

ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬೆ ದರ್ಶನ ವಿಚಾರದಲ್ಲಿ ಇಂದು ಗುರುವಾರ ಸಹ ಗಲಾಟೆ ಮುಂದುವರಿದಿದೆ. ದೇವಾಲಯದಲ್ಲಿ ಕುಟುಂಬಸ್ಥರನ್ನು ದೇಗುಲಕ್ಕೆ ಕರೆದೊಯ್ಯುವ ವಿಚಾರವಾಗಿ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಮಾರಾಮಾರಿ ನಡೆದಿದೆ.

ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು.

ನಿನ್ನೆ ಹಾಸನಾಂಬ ದರ್ಶನ ವಿಚಾರವಾಗಿ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದರು. ಜಗಳ ಬಿಡಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದರು.

ಹಾಸನಾಂಬ ದೇವಿಯ ದರ್ಶನಕ್ಕೆ ಇನ್ನು ಕೆಲವೇ ದಿನಗಳು ಅವಕಾಶವಿದ್ದು, ಭಕ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ದೇಗುಲಕ್ಕೆ ಬರುತ್ತಿದ್ದಾರೆ. ನಿಯಂತ್ರಣ ಮಾಡಲಾಗದೆ ಸಿಬ್ಬಂದಿ ಪರದಾಡುವಂತಾಯಿತು. ಹೀಗಾಗಿ 1000 ರೂಪಾಯಿ ಮೊತ್ತ ನೇರ ದರ್ಶನದ ಟಿಕೆಟ್ ವಿತರಣೆ, ವಿಐಪಿ ಪಾಸ್ ರದ್ದುಗೊಳಿಸಲಾಗಿದೆ. ಜತೆಗೆ, ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ ವಿಶೇಷ ಬಸ್​ಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT