ಸಾಂದರ್ಭಿಕ ಚಿತ್ರ  
ರಾಜ್ಯ

ಶಕ್ತಿಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದಿಲ್ಲ: ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ.

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸ್ಥಗಿತವಾಗುತ್ತದೆಯೇ ಎಂಬ ಸುದ್ದಿಗಳು ಹರಿದಾಡುತ್ತಿವೆ, ಇದರ ಬೆನ್ನಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಜಾರಿಯಲ್ಲಿರುವ ಮಹಿಳೆಯರ ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಇಲ್ಲ. ಸದ್ಯದಲ್ಲಿ ಅಂತಹ ಯಾವುದೇ ಸರ್ಕಾರದ ಹಂತದಲ್ಲಿ ಇಲ್ಲ. ಕೆಲ‌ ಮಹಿಳೆಯರು ಹಾಗೇ (ಯೋಜನೆ ಸವಲತ್ತುಗಳು ಬೇಡ) ಹೇಳಿದ್ದಾರೆ ಅಂತ ಹೇಳಿಕೆ ನೀಡಿದ್ದಾರೆ. ನಾನು ಇರಲಿಲ್ಲ‌ ಆವಾಗ. ಆದ್ದರಿಂದ ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ವಕ್ಫ್ ಆಸ್ತಿ ಗೊಂದಲವನ್ನು ಮುಂದಿಟ್ಟುಕೊಂಡು ನ.4ರಂದು ಬಿಜೆಪಿ ಪ್ರತಿಭಟನೆ ಮಾಡುತ್ತಿರುವ ವಿಚಾರದ ಬಗ್ಗೆ ಮಾತನಾಡಿ, ಬಿಜೆಪಿಯವರು ರಾಜಕೀಯಕ್ಕಾಗಿ ಪ್ರತುಭಟನೆ ಮಾಡುತ್ತಿದ್ದಾರೆ. ಅವರ ಕಾಲದಲ್ಲೂ ನೋಟೀಸ್ ಕೊಟ್ಟಿದ್ದರು ಅದಕ್ಕೆ ಏನು ಹೇಳ್ತಾರೆ.? ಅವರ ಕಾಲದಲ್ಲಿ 200ಕ್ಕೂ ಹೆಚ್ಚು ನೋಟೀಸ್ ಕೊಟ್ಟಿದ್ದರು. ಈ ಇಬ್ಬಂದಿ ರಾಜಕೀಯ ಮಾಡಬಾರದು. ಅವರ ಕಾಲದಲ್ಲಿ ನೋಟೀಸ್ ಕೊಟ್ಟು ಪ್ರಾರಂಭ ಮಾಡಿದ್ದರು. ಆದರೆ, ಈಗ ನಾನು ಹೇಳಿದ್ದೇನೆ ನೋಟೀಸ್ ವಾಪಸ್ ತಗೋತೀವಿ ಅಂತ. ಹಾಗಿದ್ದಾಗ ಸಮಸ್ಯೆ ಎಲ್ಲಿದೆ ಹೇಳಿ. ಒಂದು ವೇಳೆ ನೋಟೀಸ್ ಕೊಟ್ಟಿದ್ದರೂ ವಾಪಸ್ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಯಾರನ್ನೂ ಒಕ್ಕಲೆಬ್ಬಿಸಲ್ಲ ಅಂತ ಹೇಳಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video

ನಿತೀಶ್ ಕುಮಾರ್ ರಾಜೀನಾಮೆ ನಂತರ ಪಕ್ಷದ ಹೆಸರು ಬದಲಾವಣೆಗೆ ಮುಂದಾದ JDU; ಇಲ್ಲಿದೆ ಕಾರಣ...

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video