ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರಸ್ತೆಯಲ್ಲಿ ಕುಡಿಯಬೇಡಿ ಎಂದಿದ್ದಕ್ಕೆ ದಂಪತಿ ಮೇಲೆ ಹಲ್ಲೆ; ಮೂವರ ಬಂಧನ

ಆರೋಪಿಗಳು ತಮ್ಮ ಮನೆ ಮುಂದೆ ಸಂತ್ರಸ್ತೆರ ಎಸ್ ಯುವಿ ಕಾರಿನ ಪಕ್ಕದಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದರು. ಅವರ ಕಿರುಕುಳದಿಂದ ಸುತ್ತಮುತ್ತಲಿನ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಮನೆ ಮಾಲೀಕ ಶಿವಗಂಗೇಗೌಡ ಅವರನ್ನು ಸ್ಥಳದಿಂದ ದೂರ ಹೋಗುವಂತೆ ಹೇಳಿದರು.

ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ ದಂಪತಿ ಮೇಲೆ ಚಾಕು, ಇಟ್ಟಿಗೆಯಿಂದ ಹಲ್ಲೆ ನಡೆಸಿ ಕಾರು ಜಖಂಗೊಳಿಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಬ್ಯಾಡರಹಳ್ಳಿಯ ತುಂಗಾನಗರದಲ್ಲಿ ಘಟನೆ ನಡೆದಿದ್ದು ಮೂವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಮ್ಮ ಮನೆ ಮುಂದೆ ಸಂತ್ರಸ್ತೆರ ಎಸ್ ಯುವಿ ಕಾರಿನ ಪಕ್ಕದಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದರು. ಅವರ ಕಿರುಕುಳದಿಂದ ಸುತ್ತಮುತ್ತಲಿನ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಮನೆ ಮಾಲೀಕ ಶಿವಗಂಗೇಗೌಡ ಅವರನ್ನು ಸ್ಥಳದಿಂದ ದೂರ ಹೋಗುವಂತೆ ಹೇಳಿದರು. ಇದರಿಂದ ಬೇಸರಗೊಂಡ ಮೂವರು ದುಷ್ಕರ್ಮಿಗಳು ತಮ್ಮ ಸಹಚರರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಏಳೆಂಟು ಮಂದಿ ದುಷ್ಕರ್ಮಿಗಳ ತಂಡವು ಕಾರಿನ ಮುಂಭಾಗದ ವಿಂಡ್ ಶೀಲ್ಡ್ ಅನ್ನು ಹಾಲೊ ಬ್ಲಾಕ್‌ನಿಂದ ಒಡೆದು ಹಾನಿಗೊಳಿಸಿದ್ದಾರೆ. ನಂತರ ಆರೋಪಿಗಳು ಶಿವಲಿಂಗೆಗೌಡರನ್ನು ಅವರ ಮನೆಯ ಆವರಣದ ಹೊರಗೆ ಎಳೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆ. ಆತನನ್ನು ರಸ್ತೆಗೆ ತಳ್ಳಿ ಒದ್ದಿದ್ದರು. ಪತಿ ರಕ್ಷಣೆಗೆ ಮುಂದಾದ ಗೌಡರ ಪತ್ನಿ ಜಯಲಕ್ಷ್ಮಿ ಅವರ ಮೇಲೂ ಹಲ್ಲೆ ನಡೆದಿದೆ. ಇಡೀ ಘಟನೆ ಗೌಡರ ನಿವಾಸದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆನಂದ್, ಸಂಜಯ್ ಮತ್ತು ಧನು ಎಂಬ ಮೂವರನ್ನು ಬಂಧಿಸಲಾಗಿದೆ. ಜಯಲಕ್ಷ್ಮಿ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ, ಪ್ರಮುಖ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ. "ನನ್ನ ಗಂಡನ ಮೇಲೆ ಹಲ್ಲೆ ಮಾಡಿದವರನ್ನು ಇನ್ನೂ ಬಂಧಿಸಲಾಗಿಲ್ಲ. ಆರೋಪಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನಮ್ಮ ಮನೆಯ ಹೊರಗೆ ಮದ್ಯಪಾನ ಮಾಡಬೇಡಿ ಎಂದು ಹೇಳಿದ್ದಕ್ಕಾಗಿ ಗ್ಯಾಂಗ್ ನಮ್ಮ ಮೇಲೆ ದಾಳಿ ಮಾಡಿದೆ" ಎಂದು ಅವರು ಹೇಳಿದರು. ಆರೋಪಿಗಳೆಲ್ಲರೂ ಮದ್ಯದ ಅಮಲಿನಲ್ಲಿದ್ದರು ಎಂದು ಪೊಲೀಸರು ಶಂಕಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT