ಬಂಧನ (ಸಂಗ್ರಹ ಚಿತ್ರ) online desk
ರಾಜ್ಯ

ಬೆಂಗಳೂರು: ಕಾರಿನ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ

ರಸ್ತೆ ಬದಿ ಪಾರ್ಕ್ ಮಾಡಿ ಶಾಪಿಂಗ್, ಬ್ಯಾಂಕ್ ಕೆಲಸಕ್ಕೆಂದು ಹೋಗುವವರನ್ನು ಈ ಖತರ್ನಾಕ್ ಕಳ್ಳರ ಗ್ಯಾಂಗ್ ಟಾರ್ಗೆಟ್ ಮಾಡುತ್ತಿತ್ತು. ಪಾರ್ಕಿಂಗ್ ಮಾಡಿ ನಿಲ್ಲಿಸುತ್ತಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಲ್ಯಾಪ್‌ಟಾಪ್ ಬ್ಯಾಗ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಎತ್ತೊಯ್ಯುತ್ತಿತ್ತು.

ಬೆಂಗಳೂರು: ಕಾರುಗಳ ಗಾಜುಗಳನ್ನು ಒಡೆದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ರಾಮಜೀನಗರ ಗ್ಯಾಂಗ್ ಸದಸ್ಯರ ಸಹಿತ ನಾಲ್ವರು ಆರೋಪಿಗಳನ್ನು ಇಲ್ಲಿನ ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುರಳಿ (38), ಸೆಂಥಿಲ್ (50) ಮತ್ತು ಮೂರ್ತಿ (49) ಹಾಗೂ ಕದ್ದ ವಸ್ತುಗಳನ್ನು ಸ್ವೀಕರಿಸುತ್ತಿದ್ದ ಜಾನ್ (35) ಬಂಧಿತ ಆರೋಪಿಗಳು. ಇವರಿಂದ 7 ಲ್ಯಾಪ್‌ಟಾಪ್‌ಗಳ ಸಹಿತ 5.85 ಲಕ್ಷ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆ ಬದಿ ಪಾರ್ಕ್ ಮಾಡಿ ಶಾಪಿಂಗ್, ಬ್ಯಾಂಕ್ ಕೆಲಸಕ್ಕೆಂದು ಹೋಗುವವರನ್ನು ಈ ಖತರ್ನಾಕ್ ಕಳ್ಳರ ಗ್ಯಾಂಗ್ ಟಾರ್ಗೆಟ್ ಮಾಡುತ್ತಿತ್ತು. ಪಾರ್ಕಿಂಗ್ ಮಾಡಿ ನಿಲ್ಲಿಸುತ್ತಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಲ್ಯಾಪ್‌ಟಾಪ್ ಬ್ಯಾಗ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಎತ್ತೊಯ್ಯುತ್ತಿತ್ತು

ತಮಿಳುನಾಡಿನ ತಿರುಚನಾಪಳ್ಳಿ ಮೂಲದ ಆರೋಪಿಗಳು ಬೇರೆ ಬೇರೆ ನಗರಗಳಲ್ಲಿ ಸ್ಥಿತಿವಂತರು ಹೆಚ್ಚಾಗಿ ನೆಲೆಸಿರುವ ಏರಿಯಾಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ಮನೆ ಬಳಿ ನಿಲ್ಲಿಸಿರುವ ಕಾರುಗಳ ಗಾಜಿನ ಮೂಲಕ ಒಳಗೆ ಏನೇನಿದೆ ಎಂದು ಗಮನಿಸಿ, ರಬ್ಬರ್ ಬ್ಯಾಂಡ್ ಹಾಗೂ ಗೋಲಿ ಸಹಾಯದಿಂದ ಗಾಜನ್ನು ಒಡೆಯುತ್ತಿದ್ದರು. ನಂತರ ಒಳಗಿರುವ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗುತ್ತಿದ್ದರು. ಕದ್ದ ವಸ್ತುಗಳನ್ನು ಆರೋಪಿ ಜಾನ್‌ಗೆ ಮಾರಾಟ ಮಾಡುತ್ತಿದ್ದರು. ಆಗಸ್ಟ್ 11ರಂದು ಬೆಂಗಳೂರಿನಲ್ಲಿ ಕೃತ್ಯ ಎಸಗಿದ್ದ ಆರೋಪಿಗಳ ಬೆನ್ನುಬಿದ್ದಿದ್ದ ಪೊಲೀಸರು, ಮತ್ತೊಂದು ಕೃತ್ಯಕ್ಕೆ ಆರೋಪಿಗಳು ಸಜ್ಜಾಗಿದ್ದಾಗಲೇ ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನ 8 ಕಡೆಗಳಲ್ಲಿ ಕೃತ್ಯ ಎಸಗಿರುವುದು ಕಂಡು ಬಂದಿದೆ. ಇಂದಿರಾನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT