ಸಂಗ್ರಹ ಚಿತ್ರ 
ರಾಜ್ಯ

MUDA case: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಕೆಪಿಸಿಸಿ ದೂರಿಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯದರ್ಶಿ ರಾಜೇಶ್​ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರ ವಿರುದ್ಧ ಕಾಂಗ್ರೆಸ್ ನೀಡಿದ್ದ ದೂರಿಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯೆ ನೀಡಿದೆ.

ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್​​ ಬಾಬು ನೀಡಿರುವ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಕ್ರಿಯಿಸಿದ್ದಾರೆ. ಇದರೊಂದಿಗೆ, ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಪ್ರಕರಣದಲ್ಲಿ ರಾಷ್ಟ್ರಪತಿ ಕೂಡ ಮಧ್ಯಪ್ರವೇಶಿಸಿದಂತಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯದರ್ಶಿ ರಾಜೇಶ್​ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ. ಈ ವಿಚಾರದ ಬಗ್ಗೆ ದೂರುದಾರರಿಗೆ ನೇರವಾಗಿ ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ರಮೇಶ್ ಬಾಬು ವಿನಂತಿ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿರುವ ರಾಷ್ಟ್ರಪತಿಗಳ ಕಾರ್ಯದರ್ಶಿ, ದಯವಿಟ್ಟು ಮೇಲೆ ತಿಳಿಸಿದ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಸ್ವ-ವಿವರಣೆಯ ಮನವಿಯನ್ನು ಲಗತ್ತಿಸಿ. ಅರ್ಜಿಯ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.

ಅಲ್ಲದೆ, ಅರ್ಜಿದಾರರು ಈ ವಿಷಯದಲ್ಲಿ ಹೆಚ್ಚಿನ ಮಾಹಿತಿಗಾಗಿ ವಿಳಾಸದಾರರನ್ನು (ಯಾರಿಗೆ ಅರ್ಜಿಯನ್ನು ರವಾನಿಸಲಾಗಿದೆ) ನೇರವಾಗಿ ಸಂಪರ್ಕಿಸಲು ವಿನಂತಿಸಲಾಗಿದೆ ಎಂದೂ ಉಲ್ಲೇಖಿಸಲಾಗಿದೆ. ಅರ್ಜಿದಾರರು ತಮ್ಮ ಅರ್ಜಿ/ದೂರು ನೋಂದಾಯಿಸಲು https://helpline.rb.nic.in ಪೋರ್ಟಲ್ ಅನ್ನು ಬಳಸಬಹುದು ಎಂದೂ ಸಲಹೆ ನೀಡಿರುವುದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT