ಛಲವಾದಿ ನಾರಾಯಣಸ್ವಾಮಿ 
ರಾಜ್ಯ

Online gaming, betting ಆ್ಯಪ್'ಗಳ ನಿಷೇಧಿಸಿ: ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ

ಅನೇಕ ಕುಟುಂಬಗಳು ಮತ್ತು ಯುವಕರು ಈ ಆನ್‌ಲೈನ್ ಆಟಗಳಿಗೆ ವ್ಯಸನಿಯಾಗುವುದನ್ನು ನಾನು ನೋಡಿದ್ದೇನೆ ಮತ್ತು ಈ ಆನ್‌ಲೈನ್ ಆಟಗಳಿಗೆ ವ್ಯಸನದ ನಂತರದ ಪರಿಣಾಮಗಳಿಂದ ಕುಟುಂಬಗಳು ಬೀದಿಗೆ ಬಂದಿವೆ.

ಬೆಂಗಳೂರು: ಯುವಕರು ಹಾಗೂ ಮಕ್ಕಳ‌ ಮೇಲೆ ದುಷ್ಪರಿಣಾಮ ಬೀರುತ್ತಿರುವ ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​​ಗಳನ್ನ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಆ್ಯಪ್​ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕೋವಿಡ್ ಸಮಯದಲ್ಲಿ ಅನೇಕ ಆನ್‌ಲೈನ್ ಗೇಮ್‌ಗಳು, ಆ್ಯಪ್‌ಗಳನ್ನು ನಿಷೇಧಿಸುವುದು ಸೇರಿದಂತೆ ಅನೇಕ ಕ್ರಾಂತಿಕಾರಿ ಹೆಜ್ಜೆಯನ್ನ ನೀವು ಇಟ್ಟಿದ್ದೀರಿ. ಅನೇಕ ಕುಟುಂಬಗಳು ಮತ್ತು ಯುವಕರು ಈ ಆನ್‌ಲೈನ್ ಆಟಗಳಿಗೆ ವ್ಯಸನಿಯಾಗುವುದನ್ನು ನಾನು ನೋಡಿದ್ದೇನೆ ಮತ್ತು ಈ ಆನ್‌ಲೈನ್ ಆಟಗಳಿಗೆ ವ್ಯಸನದ ನಂತರದ ಪರಿಣಾಮಗಳಿಂದ ಕುಟುಂಬಗಳು ಬೀದಿಗೆ ಬಂದಿವೆ.

ಈ ಗೇಮ್‌ಗಳ ಮಾಲೀಕರು ಮಾತ್ರ ಐಷಾರಾಮಿ ಜೀವನವನ್ನು ನಡೆಸುತ್ತಿದ್ದಾರೆ. ಆದರೆ, ಇದರಿಂದ ಬಡಜನರು ಬಲಿಯಾಗುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಗೊಳಿಸಿದಲ್ಲಿ ಧೈರ್ಯ ಪ್ರದರ್ಶಿಸಿದ್ದೀರಿ. ಈ ಬಗ್ಗೆ ನೀವು ವೈಯಕ್ತಿಕ ಗಮನಹರಿಸಿ ದೇಶಾದ್ಯಂತ ಹೊಸ ಸಾಮಾಜಿಕ ಪಿಡುಗು ಎಂದು ಸಾಬೀತಾಗಿರುವ ಇಂತಹ ಆ್ಯಪ್​ಗಳ ಮಾಲೀಕರು/ಸಂಸ್ಥಾಪಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಾನು ಈ ಮೂಲಕ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಆನ್ ಲೈನ್ ಗೇಮಿಂಗ್ ವಿಷಯ ಮತ್ತು ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಇತರ ಕೆಲವು ಸಮಸ್ಯೆಗಳ ಬಗ್ಗೆ‌ ಚರ್ಚಿಸಿಲು ಮುಂದಿನ ದಿನಗಳಲ್ಲಿ ತಮ್ಮನ್ನು ಭೇಟಿ ಮಾಡಲು ನಾನು ಎದುರು ನೋಡುತ್ತೇನೆ ಎಂದು ಇದೇ ವೇಳೆ ಭೇಟಿಗೆ ಸಮಾವಕಾಶವನ್ನೂ ಛಲವಾದಿ ನಾರಾಯಣಸ್ವಾಮಿ ಅವರು ಕೋರಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT