ಪುರುಷೋತ್ತಮ ಬಿಳಿಮಲೆ 
ರಾಜ್ಯ

ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಶೀಘ್ರ ಆದೇಶ: ಕೆಡಿಎ ಅಧ್ಯಕ್ಷ

ಇತ್ತೀಚೆಗಷ್ಟೇ ರಾಯಚೂರಿನಲ್ಲಿ ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಮಂಗಳೂರು: ಸರ್ಕಾರಿ ವೈದ್ಯರು ಕನ್ನಡದಲ್ಲಿ ಔಷಧಿ ಚೀಟಿ(ಪ್ರಿಸ್ಕ್ರಿಪ್ಷನ್) ಬರೆಯುವುದನ್ನು ಕಡ್ಡಾಯಗೊಳಿಸಿ ಶೀಘ್ರವೇ ಆದೇಶ ಹೊರಡಿಸುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ(ಕೆಡಿಎ)ದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ರಾಯಚೂರಿನಲ್ಲಿ ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ಇದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿ ಮತ್ತೊಂದು ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಅನೇಕ ರೋಗಿಗಳಿಗೆ ಇಂಗ್ಲಿಷ್ ಪ್ರಿಸ್ಕ್ರಿಪ್ಷನ್ ಅರ್ಥವಾಗುತ್ತಿಲ್ಲ ಮತ್ತು ಫಾರ್ಮಾಸಿಸ್ಟ್‌ಗಳು ಪ್ರಿಸ್ಕ್ರಿಪ್ಷನ್ ಅನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದಿದ್ದರೆ ತಪ್ಪು ಔಷಧಿ ನೀಡುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.

ಕನ್ನಡದಲ್ಲಿದ್ದರೆ ರೋಗಿಗೆ ತಾವು ಸೇವಿಸುವ ಔಷಧಿ ಯಾವುದು ಎಂದು ತಿಳಿಯುತ್ತದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು.

ಇದೇ ವೇಳೆ ಈ ವರ್ಷದ ನವೆಂಬರ್ 1 ರೊಳಗೆ ರಾಜ್ಯದ ತಮ್ಮ ಶಾಖೆಗಳಲ್ಲಿ ಕನಿಷ್ಠ ಒಬ್ಬ ಕನ್ನಡಿಗ ಸಿಬ್ಬಂದಿಯನ್ನು ನೇಮಿಸುವಂತೆ ರಾಜ್ಯದ ಎಲ್ಲಾ ಬ್ಯಾಂಕ್‌ಗಳ ಮುಖ್ಯಸ್ಥರಿಗೆ ಪತ್ರ ಬರೆಯುವುದಾಗಿ ಪುರುಷೋತ್ತಮ ಬಿಳಿಮಲೆ ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT