ಪುರುಷೋತ್ತಮ ಬಿಳಿಮಲೆ 
ರಾಜ್ಯ

ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಶೀಘ್ರ ಆದೇಶ: ಕೆಡಿಎ ಅಧ್ಯಕ್ಷ

ಇತ್ತೀಚೆಗಷ್ಟೇ ರಾಯಚೂರಿನಲ್ಲಿ ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಮಂಗಳೂರು: ಸರ್ಕಾರಿ ವೈದ್ಯರು ಕನ್ನಡದಲ್ಲಿ ಔಷಧಿ ಚೀಟಿ(ಪ್ರಿಸ್ಕ್ರಿಪ್ಷನ್) ಬರೆಯುವುದನ್ನು ಕಡ್ಡಾಯಗೊಳಿಸಿ ಶೀಘ್ರವೇ ಆದೇಶ ಹೊರಡಿಸುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ(ಕೆಡಿಎ)ದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ರಾಯಚೂರಿನಲ್ಲಿ ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ಇದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿ ಮತ್ತೊಂದು ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಅನೇಕ ರೋಗಿಗಳಿಗೆ ಇಂಗ್ಲಿಷ್ ಪ್ರಿಸ್ಕ್ರಿಪ್ಷನ್ ಅರ್ಥವಾಗುತ್ತಿಲ್ಲ ಮತ್ತು ಫಾರ್ಮಾಸಿಸ್ಟ್‌ಗಳು ಪ್ರಿಸ್ಕ್ರಿಪ್ಷನ್ ಅನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದಿದ್ದರೆ ತಪ್ಪು ಔಷಧಿ ನೀಡುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.

ಕನ್ನಡದಲ್ಲಿದ್ದರೆ ರೋಗಿಗೆ ತಾವು ಸೇವಿಸುವ ಔಷಧಿ ಯಾವುದು ಎಂದು ತಿಳಿಯುತ್ತದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು.

ಇದೇ ವೇಳೆ ಈ ವರ್ಷದ ನವೆಂಬರ್ 1 ರೊಳಗೆ ರಾಜ್ಯದ ತಮ್ಮ ಶಾಖೆಗಳಲ್ಲಿ ಕನಿಷ್ಠ ಒಬ್ಬ ಕನ್ನಡಿಗ ಸಿಬ್ಬಂದಿಯನ್ನು ನೇಮಿಸುವಂತೆ ರಾಜ್ಯದ ಎಲ್ಲಾ ಬ್ಯಾಂಕ್‌ಗಳ ಮುಖ್ಯಸ್ಥರಿಗೆ ಪತ್ರ ಬರೆಯುವುದಾಗಿ ಪುರುಷೋತ್ತಮ ಬಿಳಿಮಲೆ ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT