ಮಂಗಳ ಮುಖಿಯರ ನಡುವೆ ಮಾರಾಮಾರಿ online desk
ರಾಜ್ಯ

ಕಲೆಕ್ಷನ್ ವಿಚಾರವಾಗಿ ಮಂಗಳ ಮುಖಿಯರ ನಡುವೆ ಗಲಾಟೆ; ನಡು ರಸ್ತೆಯಲ್ಲೇ ಮಾರಾಮಾರಿ!

ಜಗನ್ಮೋಹನ ಅರಮನೆಯ ಹತ್ತಿರ ಇರುವ ಬಸ್ ನಿಲ್ದಾಣದ ಬಳಿ ಈ ಮಾರಾಮಾರಿ ನಡೆದಿದೆ. ತಮ್ಮ Area ಗೆ ಬಂದಿದ್ದ ಮಂಗಳಮುಖಿಯರ ಗುಂಪು ಅಲ್ಲಿ ಕಲೆಕ್ಷನ್ ಮಾಡುತ್ತಿರುವುದನ್ನು ಮತ್ತೊಂದು ಗುಂಪು ವಿರೋಧಿಸಿದ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿದೆ.

ಮೈಸೂರು: ಕಲೆಕ್ಷನ್ ವಿಚಾರವಾಗಿ ಮಂಗಳ ಮುಖಿಯರ ಎರಡು ಗುಂಪಿನ ನಡುವೆ ಜಗಳವಾಗಿದ್ದು, ನಡು ಬೀದಿಯಲ್ಲೇ ಹೊಡೆದಾಡಿಕೊಂಡ ಘಟನೆ ಮೈಸೂರಿನಲ್ಲಿ ವರದಿಯಾಗಿದೆ.

ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಾರಾ ಮಾರಿ ನಡೆದಿರುವ ಬಗ್ಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಗನ್ಮೋಹನ ಅರಮನೆಯ ಹತ್ತಿರ ಇರುವ ಬಸ್ ನಿಲ್ದಾಣದ ಬಳಿ ಈ ಮಾರಾಮಾರಿ ನಡೆದಿದೆ. ತಮ್ಮ Area ಗೆ ಬಂದಿದ್ದ ಮಂಗಳಮುಖಿಯರ ಗುಂಪು ಅಲ್ಲಿ ಕಲೆಕ್ಷನ್ ಮಾಡುತ್ತಿರುವುದನ್ನು ಮತ್ತೊಂದು ಗುಂಪು ವಿರೋಧಿಸಿದ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿದೆ.

ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಓರ್ವ ಮಂಗಳ ಮುಖಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದೂ ಬಹಿರಂಗವಾಗಿದೆ. ಈ ಗಲಾಟೆಯನ್ನು ಕಂಡ ಜನರು ಕೆಲಕಾಲ ಭಯಗೊಂಡಿದ್ದರು. ಸಾರ್ವಜನಿಕರು ಮಧ್ಯಪ್ರವೇಶಿಸಿದರೂ ಇವರ ಹೊಡೆದಾಟ ನಿಲ್ಲಿಸಲು ಸಾಧ್ಯವಾಗಲಿಲ್ಲ. ಕೊನೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರೂ ಸಹ ಅಸಹಾಯಕ ಸ್ಥಿತಿಯಲ್ಲಿ ನಿಂತಿದ್ದರು. ಘಟನೆಯ ದೃಶ್ಯ ಸೆರೆಯಾಗಿದ್ದು, ವೈರಲ್​ ಆಗಿದೆ.

ಸಾರ್ವಜನಿಕ ಪ್ರದೇಶದಲ್ಲಿ ದುರ್ವತನೆ ತೋರಿದ ಹಿನ್ನೆಲೆಯಲ್ಲಿ ಪೊಲೀಸರು ಐವರು ಮಂಗಳಮುಖಿಯರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT