ಮಂಗಳ ಮುಖಿಯರ ನಡುವೆ ಮಾರಾಮಾರಿ online desk
ರಾಜ್ಯ

ಕಲೆಕ್ಷನ್ ವಿಚಾರವಾಗಿ ಮಂಗಳ ಮುಖಿಯರ ನಡುವೆ ಗಲಾಟೆ; ನಡು ರಸ್ತೆಯಲ್ಲೇ ಮಾರಾಮಾರಿ!

ಜಗನ್ಮೋಹನ ಅರಮನೆಯ ಹತ್ತಿರ ಇರುವ ಬಸ್ ನಿಲ್ದಾಣದ ಬಳಿ ಈ ಮಾರಾಮಾರಿ ನಡೆದಿದೆ. ತಮ್ಮ Area ಗೆ ಬಂದಿದ್ದ ಮಂಗಳಮುಖಿಯರ ಗುಂಪು ಅಲ್ಲಿ ಕಲೆಕ್ಷನ್ ಮಾಡುತ್ತಿರುವುದನ್ನು ಮತ್ತೊಂದು ಗುಂಪು ವಿರೋಧಿಸಿದ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿದೆ.

ಮೈಸೂರು: ಕಲೆಕ್ಷನ್ ವಿಚಾರವಾಗಿ ಮಂಗಳ ಮುಖಿಯರ ಎರಡು ಗುಂಪಿನ ನಡುವೆ ಜಗಳವಾಗಿದ್ದು, ನಡು ಬೀದಿಯಲ್ಲೇ ಹೊಡೆದಾಡಿಕೊಂಡ ಘಟನೆ ಮೈಸೂರಿನಲ್ಲಿ ವರದಿಯಾಗಿದೆ.

ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಾರಾ ಮಾರಿ ನಡೆದಿರುವ ಬಗ್ಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಗನ್ಮೋಹನ ಅರಮನೆಯ ಹತ್ತಿರ ಇರುವ ಬಸ್ ನಿಲ್ದಾಣದ ಬಳಿ ಈ ಮಾರಾಮಾರಿ ನಡೆದಿದೆ. ತಮ್ಮ Area ಗೆ ಬಂದಿದ್ದ ಮಂಗಳಮುಖಿಯರ ಗುಂಪು ಅಲ್ಲಿ ಕಲೆಕ್ಷನ್ ಮಾಡುತ್ತಿರುವುದನ್ನು ಮತ್ತೊಂದು ಗುಂಪು ವಿರೋಧಿಸಿದ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿದೆ.

ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಓರ್ವ ಮಂಗಳ ಮುಖಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದೂ ಬಹಿರಂಗವಾಗಿದೆ. ಈ ಗಲಾಟೆಯನ್ನು ಕಂಡ ಜನರು ಕೆಲಕಾಲ ಭಯಗೊಂಡಿದ್ದರು. ಸಾರ್ವಜನಿಕರು ಮಧ್ಯಪ್ರವೇಶಿಸಿದರೂ ಇವರ ಹೊಡೆದಾಟ ನಿಲ್ಲಿಸಲು ಸಾಧ್ಯವಾಗಲಿಲ್ಲ. ಕೊನೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರೂ ಸಹ ಅಸಹಾಯಕ ಸ್ಥಿತಿಯಲ್ಲಿ ನಿಂತಿದ್ದರು. ಘಟನೆಯ ದೃಶ್ಯ ಸೆರೆಯಾಗಿದ್ದು, ವೈರಲ್​ ಆಗಿದೆ.

ಸಾರ್ವಜನಿಕ ಪ್ರದೇಶದಲ್ಲಿ ದುರ್ವತನೆ ತೋರಿದ ಹಿನ್ನೆಲೆಯಲ್ಲಿ ಪೊಲೀಸರು ಐವರು ಮಂಗಳಮುಖಿಯರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತೀವ್ರ ವಿರೋಧದ ನಡುವೆಯೂ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿದ ಜಿಲ್ಲಾಡಳಿತ!

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)

ಕೇರಳ ಸರ್ಕಾರದಿಂದ ದೇಶದಲ್ಲೇ ಮೊದಲ ಹಿರಿಯ ನಾಗರಿಕರ ಆಯೋಗ ಸ್ಥಾಪನೆ

ಮುಂದಿನ ಆಧುನಿಕ ವಾರ್​ಗಳಿಗೆ ಸಿದ್ಧತೆ: BSFನಿಂದ ಡ್ರೋನ್ ಯುದ್ಧ ಶಾಲೆ ಆರಂಭ

SCROLL FOR NEXT