ರಾಜ್ಯ

ನಟ ದರ್ಶನ್ A1 ಆರೋಪಿ ಎಂದು ಗುರುತಿಸುವುದು ಪೊಲೀಸರಿಗೆ ಬಿಟ್ಟಿದ್ದು- ಗೃಹ ಸಚಿವ; ನಾಳೆ ಅಥವಾ ನಾಡಿದ್ದು ಚಾರ್ಜ್ ಶೀಟ್ ಸಲ್ಲಿಕೆ- ಪೊಲೀಸ್ ಆಯುಕ್ತ

ಪ್ರಕರಣ ಬಗ್ಗೆ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರವೇ ದರ್ಶನ್ ಹಾಗೂ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ‘ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಮುಗಿಸಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲು ಸಜ್ಜಾಗಿದ್ದಾರೆ. ಆರೋಪಿಗಳ ಬಂಧನವಾದ 90 ದಿನಗಳ ಒಳಗೆ ನ್ಯಾಯಾಲಯಕ್ಕೆ ಕಡ್ಡಾ ಯವಾಗಿ ಚಾರ್ಜ್ ಶೀಟ್ ಸಲ್ಲಿಸಬೇಕಾಗುತ್ತದೆ. ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ.

ಈ ಮಧ್ಯೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿರುವ ನಟ ದರ್ಶನ್ ನ್ನು ಆರೋಪಿ ನಂಬರ್ 1 ಎಂದು ಚಾರ್ಜ್ ಶೀಟ್ ನಲ್ಲಿ ಹೆಸರಿಸಲಾಗುತ್ತದೆ ಎಂಬ ಮಾತುಗಳು ಹಲವು ದಿನಗಳಿಂದ ಕೇಳಿಬರುತ್ತಲೇ ಇದೆ. ಈ ಬಗ್ಗೆ ಇಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಕೇಳಿದಾಗ, ಯಾರು ನಂಬರ್ 1, ನಂಬರ್ 2 ಯಾರು ಎಂದು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸುವುದು ಪೊಲೀಸ್ ಅಧಿಕಾರಿಗಳು ನಾವಲ್ಲ ಎಂದರು. ಬಿಜೆಪಿ ನಾಯಕರು ಸುಖಾಸುಮ್ಮನೆ ಮಾಡುತ್ತಿರುವ ಎಲ್ಲ ಆರೋಪಗಳಿಗೆ ಸರ್ಕಾರ ಸರಿಯಾದ ಪ್ರತ್ಯುತ್ತರ ನೀಡುತ್ತದೆ ಎಂದರು.

ಪೊಲೀಸ್ ಆಯುಕ್ತರ ಹೇಳಿಕೆ

ಪ್ರಕರಣ ಬಗ್ಗೆ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರವೇ ದರ್ಶನ್ ಹಾಗೂ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ‘ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ. ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್​ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ ಎಂದು ಹೇಳಿದರು.

ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್​ಎಸ್​ಎಲ್​ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್​ನ ಎಫ್​ಎಸ್​ಎಲ್​ನಿಂದ ಕೆಲವು ವರದಿಗಳು ಬರಬೇಕಿವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈಗ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸಲಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದರು. ಹಾಕಿದ್ರಾ?: BJP ವಿರುದ್ಧ ಸಿದ್ದರಾಮಯ್ಯ ಕಿಡಿ

'ಮದುವೆ ಮನೆಯಲ್ಲಿ ಬೇರೊಬ್ಬ ಮಹಿಳೆ ಜೊತೆ ಹಾಸಿಗೆಯಲ್ಲಿ ರೆಡ್​​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್: ಭಾರತೀಯ ಮಹಿಳಾ ಕ್ರಿಕೆಟಿಗರು ಆತನನ್ನು ಥಳಿಸಿದ್ದರು'

'ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ: ಗವರ್ನರ್ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೋ, ಜಗನ್ನಾಥ ಭವನದಲ್ಲಿದೆಯೋ?'

ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರ ಬದಲಿಸಿದ ಅಮೆರಿಕ: ಇಂಡೋ-ಪೆಸಿಫಿಕ್‌ಗೆ ಮೊದಲ ಆದ್ಯತೆ; ಯುರೋಪ್‌ ಅನ್ನು ದೂರವಿಟ್ಟ ಟ್ರಂಪ್!

T20 World cup: ಬಾಂಗ್ಲಾವನ್ನು ಹೊರಗಿಟ್ಟಿದ್ದು 'ಅನ್ಯಾಯ', ಟೂರ್ನಿಯಲ್ಲಿ ನಾವು ಆಡಲ್ಲ?; ICCಗೆ ಪಾಕಿಸ್ತಾನ ಧಮ್ಕಿ!

SCROLL FOR NEXT